Home News ರಥಸಪ್ತಮಿ ಆಚರಣೆ

ರಥಸಪ್ತಮಿ ಆಚರಣೆ

0

ಪತಂಜಲಿ ಯೋಗ ಶಿಕ್ಷಣ ಸಮಿತಿ ಶಿಡ್ಲಘಟ್ಟ ಶಾಖೆಯ ವತಿಯಿಂದ ಭಾನುವಾರ ರಥಸಪ್ತಮಿಯನ್ನು ನಗರದ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಸೂರ್ಯನಮಸ್ಕಾರಗಳನ್ನು ಮಾಡುವುದರ ಮೂಲಕ ಆಚರಿಸಲಾಯಿತು.
ಬೆಳಗ್ಗೆ ಸೂರ್ಯೋದಯಕ್ಕೆ ಮುಂಚಿತವಾಗಿ ಸೂರ್ಯ ಭಗವಂತನ ಚಿತ್ರಪಠಕ್ಕೆ ಪೂಜೆ ಸಲ್ಲಿಸುವುದರಿಂದ ಕಾರ್ಯಕ್ರಮ ಪ್ರಾರಂಭವಾಯಿತು. ಒಟ್ಟಾಗಿ 89 ಜನ ಯೋಗ ಬಂಧು-ಭಗಿನಿಯರು ಸೇರಿ 50,280 ಸೂರ್ಯನಮಸ್ಕಾರಗಳನ್ನು ಮಾಡಿದರು. ಅನಂತಲಕ್ಷ್ಮಿ 950, ಸೌಭಾಗ್ಯ 930 ಹಾಗೂ ಶ್ರೀಕಾಂತ್, ಮಂಜುನಾಥ, ಗೋಪಿ, ರಮಣ, ಚಿಕ್ಕಣ್ಣ ತಲಾ 1008 ಸೂರ್ಯನಮಸ್ಕಾರಗಳನ್ನು ಮಾಡಿದರು.

ಶಿಡ್ಲಘಟ್ಟದಲ್ಲಿ ಭಾನುವಾರ ರಥಸಪ್ತಮಿಯ ಪ್ರಯುಕ್ತ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಯೋಗದ ಬಗ್ಗೆ ಜಾಗೃತಿ ಮೂಡಿಸಲು ಯೋಗ ನಡಿಗೆಯನ್ನು ನಗರದ ಪ್ರಮುಖ ಬೀದಿಗಳಲ್ಲಿ ಆಯೋಜಿಸಲಾಗಿತ್ತು.
ಶಿಡ್ಲಘಟ್ಟದಲ್ಲಿ ಭಾನುವಾರ ರಥಸಪ್ತಮಿಯ ಪ್ರಯುಕ್ತ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಯೋಗದ ಬಗ್ಗೆ ಜಾಗೃತಿ ಮೂಡಿಸಲು ಯೋಗ ನಡಿಗೆಯನ್ನು ನಗರದ ಪ್ರಮುಖ ಬೀದಿಗಳಲ್ಲಿ ಆಯೋಜಿಸಲಾಗಿತ್ತು.

ನಂತರ ಯೋಗದ ಬಗ್ಗೆ ಜಾಗೃತಿ ಮೂಡಿಸಲು ಯೋಗ ನಡಿಗೆಯನ್ನು ನಗರದ ಪ್ರಮುಖ ಬೀದಿಗಳಲ್ಲಿ ಆಯೋಜಿಸಲಾಗಿತ್ತು. ಭಾರತಮಾತೆಗೆ, ವೀರ ಯೋಧರಿಗೆ ಜೈಕಾರ ಕೂಗುತ್ತಾ, ದೇಶಭಕ್ತಿ ಹಾಗೂ ಯೋಗಗೀತೆಗಳನ್ನು ಹಾಡುತ್ತಾ ಮೆರವಣಿಗೆ ನಡೆಸಿದರು.
ನಂತರ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ವಿಶೇಷ ಪೂಜಿಯನ್ನು ಸಲ್ಲಿಸಿ, ಪ್ರಸಾದ ವಿನಿಯೋಗ ಮಾಡಲಾಯಿತು.
ಪತಂಜಲಿ ಯೋಗ ಶಿಕ್ಷಣ ಸಮಿತಿ ಸೌಪರ್ಣಿಕಾ ವಲಯ ಪ್ರಮುಖ್ ಪಿ.ಶ್ರೀಕಾಂತ್, ಜಿಲ್ಲಾ ಸಂಚಾಲಕ ಸುಂದರಾಚಾರಿ, ಅಧ್ಯಕ್ಷ ಶಂಕರ್, ಎಲ್. ಕೇಶವ ಮೂರ್ತಿ, ಶಶಿಕಾಂತ್ ಹಾಗೂ ಯೋಗ ಬಂಧು-ಭಗಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

error: Content is protected !!