ರಸ್ತೆ ಕಾಮಗಾರಿ ತ್ವರಿತಗೊಳಿಸಲು ಕರವೇ ಒತ್ತಾಯ

0
485

ಶಿಡ್ಲಘಟ್ಟ ಮೂಲಕ ಚಿಂತಾಮಣಿ ಹಾಗೂ ಮುಳಬಾಗಲು ಸಂಪರ್ಕಿಸುವ ಹೆದ್ದಾರಿ ಕಾಮಗಾರಿ ಸ್ಥಗಿತಗೊಂಡಿದೆ. ಇದರಿಂದ ರಸ್ತೆಯಲ್ಲಿ ವಾಹನಗಳು ಓಡಾಡಲು ಆಗದೆ ಅಪಘಾತಗಳು ಸಂಭವಿಸಿದ್ದು, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಚಲಪತಿ ಬಣದ ಜಿಲ್ಲಾಧ್ಯಕ್ಷ ಸೋಮಶೇಖರ್ ತಿಳಿಸಿದರು.
ನಗರದ ಚಿಂತಾಮಣಿ ರಸ್ತೆಯಲ್ಲಿರುವ ಉಲ್ಲೂರಪೇಟೆ ಸರ್ಕಾರಿ ಶಾಲೆಯ ಮುಂದೆ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ಸ್ಥಗಿತಗೊಂಡಿದೆ. ಕಾಮಗಾರಿಯನ್ನು ತ್ವರಿಗತಿಯಲ್ಲಿ ಪೂರ್ಣಗೊಳಿಸದಿದ್ದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸುವುದಾಗಿ ಹೇಳಿದರು.
ನಗರದ ಚಿಂತಾಮಣಿ ರಸ್ತೆಯಲ್ಲಿ ಸುಮಾರು ೨ ವರ್ಷಗಳಿಂದ ರಸ್ತೆ ರಸ್ತೆ ಕಾಮಗಾರಿ ನಡೆಯುತ್ತಿದೆ. ಕಾಮಗಾರಿಯಿಂದಾಗಿ ರಸ್ತೆ ಕಿರಿದಾಗಿ ದ್ವಿಚಕ್ರವಾಹನಗಳು, ಹಾಗೂ ಸಾರಿಗೆ ಬಸ್ಸಗಳು ಸೇರಿದಂತೆ ಎಲ್ಲಾ ವಾಹನಗಳಿಗೂ ತೊಂದರೆಯಾಗಿದೆ. ಅಪಘಾತಗಳು ಸಹ ನಡೆಯುತ್ತಿವೆ. ಮಳೆ ಬಂದಾಗ ನೀರು ಹರಿದು ಹೋಗಲು ಜಾಗವಿಲ್ಲದೆ ಅಕ್ಕ ಪಕ್ಕದ ಮನೆಗಳಿಗೆ ನುಗ್ಗಿ ತೊಂದರೆ ಉಂಟಾಗಿತ್ತು. ಮನೆಗಳೆಲ್ಲಾ ಧೂಳುಮಯವಾಗಿವೆ. ರಸ್ತೆ ಪಕ್ಕದಲ್ಲಿ ಸರ್ಕಾರಿ ಶಾಲೆ ಇದ್ದು, ಶಾಲಾ ಕೊಠಡಿಗಳಲ್ಲಿ ಧೂಳು ತುಂಬಿದ್ದು, ವಿದ್ಯಾರ್ಥಿಗಳು ಊಟ ಮಾಡಲು ಹಾಗೂ ಪಾಠ ಪ್ರವಚನಗಳಿಗೂ ತೊಂದರೆಯಾಗಿದೆ. ಸುಮಾರು ೧೦ ದಿನಗಳಿಂದ ರಸ್ತೆ ಕಾಮಗಾರಿ ಸ್ಥಗಿತಗೊಂಡಿದ್ದು, ಕೂಡಲೇ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕೆಂದು ಒತ್ತಾಯಿಸಿದ ಅವರು ಇಲ್ಲದಿದ್ದ ಪಕ್ಷದಲ್ಲಿ ಉಗ್ರ ಪ್ರತಿಭಟನೆಯನ್ನು ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಕರವೇ ತಾಲ್ಲೂಕು ಅಧ್ಯಕ್ಷ ಯಾಮೇಗೌಡ, ಸದಸ್ಯರಾದ ಗಂಗಾಧರ್, ಮೂರ್ತಿ, ಸುಜಿತ್, ಸುತ್ತಮುತ್ತಲಿನ ನಿವಾಸಿಗಳಾದ ಮುನಿಯಪ್ಪ, ಕೃಷ್ಣ, ಮುನಿಯಪ್ಪ, ನಾರಾಯಣಪ್ಪ, ಪಾರ್ವತಮ್ಮ, ಸರಸ್ವತಮ್ಮ, ಸುಬ್ಬು, ಅಪ್ಪಿ ಹಾಜರಿದ್ದರು.

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!