ವೃತ್ತಿಗಳಲ್ಲಿ ಕೌಶಲ್ಯ ವೃದ್ದಿಸಿಕೊಳ್ಳುವುದು ಅತಿ ಮುಖ್ಯ. ಅದರಲ್ಲೂ ಗ್ರಾಮೀಣ ಭಾಗದ ಯುವ ಜನಾಂಗವು ವೃತ್ತಿ ಕೌಶಲ್ಯ ಕೊರತೆಯಿಂದಲೆ ಸಾಕಷ್ಟು ಸಂಕಷ್ಟಗಳನ್ನು ಅನುಭವಿಸುತ್ತಿದ್ದಾರಲ್ಲದೆ ನಿರುದ್ಯೋಗ ಸಮಸ್ಯೆಯೂ ಹೆಚ್ಚುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಜೆ.ಮಂಜುನಾಥ್ ತಿಳಿಸಿದರು.
ನಗರದ ಭಕ್ತರಹಳ್ಳಿ ವೆಂಕಟರಾಯಪ್ಪನವರ ಫ್ಯಾಕ್ಟರಿ ಸಭಾಂಗಣದಲ್ಲಿ ನಡೆಯುತ್ತಿದ್ದ ರಾಜೀವ್ ಗಾಂಧಿ ಚೈತನ್ಯ ಯೋಜನೆಯಡಿ ಸಂಜೀವಿನ ಸ್ವಯಂ ಉದ್ಯೋಗ ತರಬೇತಿ ಶಿಬಿರ ಬುಧವಾರ ಮುಕ್ತಾಯವಾಗಿದ್ದು ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸರ್ಕಾರವು ಎಲ್ಲ ಕೌಶಲ್ಯ ಅಗತ್ಯವುಳ್ಳ ತರಬೇತಿಗಳಿಗಾಗಿ ಪ್ರತ್ಯೇಕ ಇಲಾಖೆಯನ್ನೆ ರಚಿಸಿದ್ದು ಆ ಮೂಲಕ ನಿರುದ್ಯೋಗ ಯುವಕ ಯುವತಿಯರಿಗೆ ವೃತ್ತಿ ಕೌಶಲ್ಯ ತರಬೇತಿಯನ್ನು ನೀಡಿ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಹೇಳಿದರು.
ಸ್ವಯಂ ಉದ್ಯೋಗ ಕೈಗೊಂಡು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುವಂತೆ ಹೇಳಿದ ಅವರು, ಎಲ್ಲ ಶೌಚಾಲಯವನ್ನು ನಿರ್ಮಿಸಿಕೊಂಡು ಬಯಲು ಮುಕ್ತ ಸಮಾಜಕ್ಕೆ ಕೈ ಜೋಡಿಸಿ ಎಂದು ಮನವಿ ಮಾಡಿದರು.
ಶಿಬಿರಾರ್ಥಿಗಳು ತಮ್ಮ ತರಬೇತಿ ಅವಧಿಯಲ್ಲಿನ ಅನಿಸಿಕೆಗಳು, ತರಬೇತಿಯಿಂದ ಆದ ಅನುಕೂಲಗಳ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಂಡರು. ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ತರಬೇತಿ ಅವಧಿಯಲ್ಲಿನ ಭತ್ಯದ ಚೆಕ್ಗಳನ್ನು ವಿತರಿಸಲಾಯಿತು.
ತಾಲ್ಲೂಕು ಪಂಚಾಯಿತಿ ಇಒ ವೆಂಕಟೇಶ್, ಕರ್ನಾಟಕ ವಿದ್ಯುತ್ ಮಂಡಳಿಯ ನಿರ್ದೆಶಕ ಭಕ್ತರಹಳ್ಳಿ ಮುನೇಗೌಡ, ಕೃಷ್ಣಾ ಪ್ರಗತಿ ಬ್ಯಾಂಕ್ನ ವ್ಯವಸ್ಥಾಪಕ ಬಸವರಾಜ್, ಸೌಂದರ್ಯ ಪಟ್ಟಣ ಹಾಗೂ ಗ್ರಾಮೀಣ ಸಂಸ್ಥೆಯ ವೆಂಕಟರೋಣಪ್ಪ ಮತ್ತಿತರರು ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







