Home News ರಾಜ್ಯದಲ್ಲಿ ಹತ್ಯೆ ಸಂಸ್ಕೃತಿಯನ್ನು ತಡೆಯಬೇಕು

ರಾಜ್ಯದಲ್ಲಿ ಹತ್ಯೆ ಸಂಸ್ಕೃತಿಯನ್ನು ತಡೆಯಬೇಕು

0

ಭಾರತೀಯ ಸಂವಿಧಾನಕ್ಕೆ ದೊಡ್ಡ ಅಪಾಯ ಸೃಷ್ಟಿಯಾಗಿದೆ. ಗೌರಿಯವರನ್ನು ಹತ್ಯೆ ಮಾಡುವ ಮೂಲಕ ರಾಜ್ಯದಲ್ಲಿ ಹತ್ಯೆ ಸಂಸ್ಕೃತಿಯನ್ನು ಮುಂದುವರೆಸಲಾಗುತ್ತಿದೆ. ಇದನ್ನು ತಡೆಗಟ್ಟಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ರವಿಪ್ರಕಾಶ್ ತಿಳಿಸಿದರು.
ನಗರದ ಕೋಟೆ ವೃತ್ತದಲ್ಲಿ ಮಂಗಳವಾರ ಬೆಂಗಳೂರಿನ ಸೆಂಟ್ರಲ್ ಕಾಲೇಜು ಮೈದಾನದಲ್ಲಿ ನಡೆಯುವ ಗೌರಿ ಹತ್ಯೆ ವಿರೋಧಿಸಿ ಪ್ರತಿರೋಧ ಸಮಾವೇಶದಲ್ಲಿ ಪಾಲ್ಗೊಳ್ಳಲು ತೆರಳುವ ಮುನ್ನ ಅವರು ಮಾತನಾಡಿದರು.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿರೋಧ ಸಮಾವೇಶ ಆಯೋಜಿಸಲಾಗಿದೆ. ‘ಗೌರಿ ಲಂಕೇಶ್ ಸಾವಿಗೆ ಒಂದು ಹನಿ ಕಣ್ಣೀರು, ಒಂದು ನಿಮಿಷ ಮೌನ ಹಾಗೂ ಒಂದು ದೃಢ ನಿರ್ಧಾರ’ ಎಂಬ ಧ್ಯೇಯದೊಂದಿಗೆ ಸಮಾವೇಶ ನಡೆಯಲಿದೆ. ಹಂತಕರನ್ನು ಬಂಧಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿರುವುದನ್ನು ಈ ಸಂದರ್ಭದಲ್ಲಿ ಖಂಡಿಸುತ್ತೇವೆ ಎಂದು ಹೇಳಿದರು.
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಉಪಾಧ್ಯಕ್ಷ ಮುನಿಕೆಂಪಣ್ಣ, ಪ್ರಧಾನ ಕಾರ್ಯದರ್ಶಿ ಜೆ.ಎಸ್.ವೆಂಕಟಸ್ವಾಮಿ, ಪ್ರತೀಶ್, ನಾರಾಯಣಸ್ವಾಮಿ, ವೆಂಕಟರೆಡ್ಡಿ, ದೇವರಾಜ್, ವೆಂಕಟರೋಣಪ್ಪ, ಜಯಂತಿಗ್ರಾಮ ನಾರಾಯಣಸ್ವಾಮಿ, ಗಜೇಂದ್ರ, ಗೋವಿಂದಪ್ಪ, ಶಾರದಮ್ಮ ಹಾಜರಿದ್ದರು.
 

error: Content is protected !!