19.5 C
Sidlaghatta
Sunday, July 20, 2025

ರಾಜ್ಯಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳು

- Advertisement -
- Advertisement -

ತಾಲ್ಲೂಕಿನ ಆರು ಮಂದಿ ಕ್ರೀಡಾಪಟುಗಳು ಜಿಲ್ಲಾಮಟ್ಟಲ್ಲಿ ವಿಜೇತರಾಗಿ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 20 ವರ್ಷ ಮೇಲ್ಪಟ್ಟವರಲ್ಲಿ ದ್ಯಾವಪ್ಪನಗುಡಿ ನಾರಾಯಣಸ್ವಾಮಿ 10 ಸಾವಿರ ಮೀಟರ್ ಓಟದಲ್ಲಿ ಪ್ರಥಮ ಹಾಗೂ ಐದು ಸಾವಿರ ಮೀಟರ್ ಓಟದಲ್ಲಿ ದ್ವಿತೀಯ ; 16 ವರ್ಷ ಮೇಲ್ಪಟ್ಟವರಲ್ಲಿ ಎಸ್.ದಿಲೀಪ್ 400 ಮೀಟರ್ ಓಟದಲ್ಲಿ ದ್ವಿತೀಯ, ಲಾಂಗ್ ಜಂಪ್ನಲ್ಲಿ ಪ್ರಥಮ ; ಎಸ್.ಮಾದೇಶ 10 ಸಾವಿರ ಮೀಟರ್ ಓಟದಲ್ಲಿ ದ್ವಿತೀಯ, ಲಾಂಗ್ಜಂಪ್ನಲ್ಲಿ ದ್ವಿತೀಯ, ಹರೀಶ 3 ಸಾವಿರ ಮೀಟರ್ ಓಟದಲ್ಲಿ ದ್ವಿತೀಯ, ಲಾಂಗ್ಜಂಪ್ನಲ್ಲಿ ತೃತೀಯ, ಹರ್ಡಲ್ಸ್ನಲ್ಲಿ ಪ್ರಥಮ ; 14 ವರ್ಷ ಮೇಲ್ಪಟ್ಟವರಲ್ಲಿ ಎನ್.ನಿತಿನ್ 100 ಮೀಟರ್ ಓಟದಲ್ಲಿ ದ್ವಿತೀಯ, 600 ಮೀಟರ್ ಓಟದಲ್ಲಿ ಪ್ರಥಮ, ಎಂ.ಮುರಳಿ ಹೈಜಂಪ್ನಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
‘ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಗಸ್ಟ್ 20 ರಿಂದ ನಾಲ್ಕು ದಿನಗಳ ಕಾಲ ನಡೆಯುವ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಯ್ಕೆಯಾದ ಕ್ರೀಡಾಪಟುಗಳು ಸೆಪ್ಟೆಂಬರ್ನಲ್ಲಿ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆಯಲಿರುವ ದಕ್ಷಿಣ ಭಾರತ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ನಮ್ಮ ತಾಲ್ಲೂಕಿನಿಂದ ಉತ್ತಮ ಕ್ರೀಡಾಪಟುಗಳು ಹೊರಹೊಮ್ಮಲೆಂದು ರಾಜ್ಯಮಟ್ಟಕ್ಕೆ ಆಯ್ಕೆಯಾದವರಿಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ತರಬೇತಿಯನ್ನು ನೀಡುತ್ತಿದ್ದೇನೆ’ ಎಂದು ಕ್ರೀಡಾ ತರಬೇತುದಾರ ಮುನಿರಾಜು ತಿಳಿಸಿದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!