ತಾಲ್ಲೂಕಿನ ಮಳ್ಳೂರು ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಚಾಂದಿನಿ ಮತ್ತು ಪುಷ್ಪಲತಾ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ.
ಬೆಂಗಳೂರಿನ ದಯಾನಂದಸಾಗರ್ ಪದವಿ ಪೂರ್ವ ಕಾಲೇಜಿನಲ್ಲಿ ಈಚೆಗೆ ನಡೆದ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಇಂಗ್ಲೀಷ್ ಚರ್ಚಾ ಸ್ಪರ್ಧೆಯಲ್ಲಿ ಚಾಂದಿನಿ ದ್ವಿತೀಯ ಸ್ಥಾನ ಮತ್ತು ಜಾನಪದ ಗೀತೆಗಾಯನ ಸ್ಪರ್ಧೆಯಲ್ಲಿ ಟಿ.ಎನ್.ಪುಷ್ಪಲತಾ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.
‘ಗ್ರಾಮೀಣ ಮಕ್ಕಳು ಅಪ್ಪಟ ಪ್ರತಿಭಾವಂತರು ಎಂಬುದಕ್ಕೆ ನಿದರ್ಶನವಾಗಿ ನಮ್ಮ ವಿದ್ಯಾರ್ಥೀಗಳು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾಗಿ ಶಿಕ್ಷಣ ಸಂಸ್ಥೆಗೆ ಕೀರ್ತಿ ಮತ್ತು ಇತರ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ತುಂಬಿದ್ದಾರೆ’ ಎಂದು ಪ್ರಾಂಶುಪಾಲ ಚಂದ್ರಕುಮಾರ್ ತಿಳಿಸಿದರು.
- Advertisement -
- Advertisement -
- Advertisement -
- Advertisement -