Home News ರಾಜ್ಯೋತ್ಸವ ಆಚರಿಸಿದ ಮಾತ್ರಕ್ಕೆ ಭಾಷೆ ಉಳಿಯುವುದಿಲ್ಲ

ರಾಜ್ಯೋತ್ಸವ ಆಚರಿಸಿದ ಮಾತ್ರಕ್ಕೆ ಭಾಷೆ ಉಳಿಯುವುದಿಲ್ಲ

0

ಮಾತೃ ಭಾಷೆಯ ಬಗ್ಗೆ ಅಭಿಮಾನ ಶೂನ್ಯರಾಗಿ, ಅನ್ಯ ಭಾಷೆಗಳನ್ನು ಪ್ರೀತಿಸುವ ಧೋರಣೆಯನ್ನು ಬದಿಗಿರಿಸಿ. ಕನ್ನಡ ಭಾಷೆಗೆ ಗೌರವ ನೀಡುವುದನ್ನು ಪ್ರತಿಯೊಬ್ಬರೂ ರೂಡಿಸಿಕೊಂಡಾಗ ನಮ್ಮ ಮಾತೃಭಾಷೆ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಕನ್ನಡ ಸಾರಸ್ವತ ಪರಿಚಾರಿಕೆ ಅಧ್ಯಕ್ಷ ಬಿ.ಆರ್.ಅನಂತಕೃಷ್ಣ ಹೇಳಿದರು.
ತಾಲೂಕಿನ ಅಪ್ಪೇಗೌಡನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಭಾನುವಾರ ಗ್ರಾಮದ ಕನ್ನಡ ಯುವ ಬಳಗದಿಂದ ಏರ್ಪಡಿಸಲಾಗಿದ್ದ 62 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರತಿ ವರ್ಷ ನವೆಂಬರ್ ತಿಂಗಳಿನಲ್ಲಿ ಕನ್ನಡ ರಾಜ್ಯೋತ್ಸವದ ಹೆಸರಿನಲ್ಲಿ ಹಬ್ಬ ಆಚರಿಸಿದ ಮಾತ್ರಕ್ಕೆ ಭಾಷೆ ಉಳಿಯುವುದಿಲ್ಲ ಬದಲಿಗೆ ಪ್ರತಿಯೊಬ್ಬರೂ ಕನ್ನಡ ಭಾಷೆಯನ್ನು ಮಾತನಾಡುವುದು ಸೇರಿದಂತೆ ಮಾತೃಭಾಷೆಯಲ್ಲಿ ವ್ಯವಹರಿಸಿದಾಗ ಭಾಷೆ ಉಳಿಯುತ್ತದೆ ಎಂದರು.
ಅಪ್ಪೇಗೌಡನಹಳ್ಳಿ ಗ್ರಾ.ಪಂ ಸದಸ್ಯ ಎ.ಎಂ.ತ್ಯಾಗರಾಜ್ ಮಾತನಾಡಿ ಕನ್ನಡ ಭಾಷೆಗೆ ಬಹಳ ಪುರಾತನವಾದ ಹಿನ್ನೆಲೆಯಿದೆ, ದೇಶಕ್ಕೆ ಅನೇಕ ಮಂದಿ ದಿಗ್ಗಜರನ್ನು ನೀಡಿರುವಂತಹ ನಾಡಿನಲ್ಲಿ ಕನ್ನಡ ಭಾಷೆಯನ್ನು ಉಳಿಸುವ ನಿಟ್ಟಿನಲ್ಲಿ ಎಲ್ಲರೂ ತಮ್ಮ ಮಾತೃಭಾಷೆಯನ್ನು ಗೌರವಿಸುವುದು ಸೇರಿದಂತೆ ಹೆತ್ತ ತಾಯಿಯನ್ನು ಪೂಜಿಸಿದಷ್ಟೇ ಭಾಷೆಯನ್ನು ಪೂಜಿಸಿ ಗೌರವಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ನಗರದ ನೃತ್ಯ ಕಲಾವಿದ ಸಿ.ಎನ್.ಮುನಿರಾಜು ವಿವಿಧ ಕನ್ನಡ ಗೀತೆಗಳಿಗೆ ನೃತ್ಯ ಮಾಡಿದರು. ಗ್ರಾಮದ ಸರ್ಕಾರಿ ಶಾಲಾ ಮಕ್ಕಳಿಂದ ವಿವಿಧ ನಾಟಕ ಹಾಗು ನೃತ್ಯಗಳನ್ನು ಆಯೋಜಿಸಲಾಗಿತ್ತು.
ಕೆಳದಿ ಚನ್ನಮ್ಮ ಪ್ರಶಸ್ತಿಗೆ ಪಾತ್ರರಾಗಿರುವ ತಾಲೂಕಿನ ವರದನಾಯಕನಹಳ್ಳಿ ಶಾಲೆಯ ವಿದ್ಯಾರ್ಥಿಗಳಾದ ಎಚ್.ಕೆ.ದೀಕ್ಷಿತಾ ಮತ್ತು ಎಚ್.ಕೆ.ಅಂಬಿಕಾ ಸೇರಿದಂತೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಪಾತ್ರರಾದ ಅಪ್ಪೇಗೌಡನಹಳ್ಳಿ ಶಾಲೆಯ ಮುಖ್ಯಶಿಕ್ಷಕಿ ವೆಂಕಟರತ್ನಮ್ಮ ಮತ್ತು ಬೆಂಗಳೂರಿನ ಚಿಗುರು ಕಲ್ಚರಲ್ ಟ್ರಸ್ಟ್ ವತಿಯಿಂದ 2017 ಸಾಲಿನ `ಕನಕದಾಸರ ಸದ್ಭಾವನ ಪ್ರಶಸ್ತಿ’ ಪಡೆದ ಅಪ್ಪೇಗೌಡನಹಳ್ಳಿಯ ಗ್ರಾ.ಪಂ ಸದಸ್ಯ ಎ.ಎಂ.ತ್ಯಾಗರಾಜ್, ಕನ್ನಡ ಸಾರಸ್ವತ ಪರಿಚಾರಿಕೆ ಅಧ್ಯಕ್ಷ ಬಿ.ಆರ್.ಅನಂತಕೃಷ್ಣ ಹಾಗು ನೃತ್ಯ ಕಲಾವಿದ ಸಿ.ಎನ್.ಮುನಿರಾಜುರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ತಾ.ಪಂ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣ, ಗ್ರಾ.ಪಂ ಸದಸ್ಯರಾದ ಉಮಾ, ನೇತ್ರಾವತಿ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರವಿಪ್ರಕಾಶ್, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಪುಷ್ಪ, ಶಾಲೆಯ ಮುಖ್ಯ ಶಿಕ್ಷಕಿ ವೆಂಕಟರತ್ನಮ್ಮ ಶಿಕ್ಷಕರಾದ ಚಾಂದ್‍ಪಾಷ, ನರಸಿಂಹಮೂಇರ್ತಿ, ನಾಗೇಶ್, ಪ್ರಸಾದ್, ಮಧು, ಪ್ರದೀಪ್, ಮನೋಜ್, ನವೀನ್, ಮಂಜುನಾಥ್, ರಘು, ಶ್ರೀಕಾಂತ್ ಮತ್ತಿತರರು ಹಾಜರಿದ್ದರು.

error: Content is protected !!