Home News ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳಿಂದ ಸಂಭ್ರಮಾಚರಣೆ

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳಿಂದ ಸಂಭ್ರಮಾಚರಣೆ

0

ಸಮಗ್ರ ಕೃಷಿ ಆದಾರಿತ ನೀರಾವರಿ ಕೆ.ಸಿ.ವ್ಯಾಲಿ ಹಾಗು ಎಚ್.ಎನ್ ವ್ಯಾಲಿ ಯೋಜನೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿರುವುದು ಸ್ವಾಗತಾರ್ಹ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾದ್ಯಕ್ಷ ಭಕ್ತರಹಳ್ಳಿ ಭೈರೇಗೌಡ ಹೆಳಿದರು.
ನಗರದ ಬಸ್ ನಿಲ್ದಾಣದ ಬಳಿಯಿರುವ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಚೇರಿಯ ಮುಂಭಾಗದಲ್ಲಿ ಶುಕ್ರವಾರ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಆಚರಿಸಿ ಮಾತನಾಡಿದರು.
ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆ ಬರಡು ಪ್ರದೇಶವಾಗಿದ್ದು, ಈ ಬಾಗದ ಜನತೆ ಶಾಶ್ವತ ನೀರಾವರಿಗಾಗಿ ಹಲವಾರು ಹೋರಾಟಗಳನ್ನು ನಡೆಸಿದ ಪರಿಣಾಮ ಸುಮಾರು ೧೨೮೦ ಕೋಟಿ ರೂಗಳ ವೆಚ್ಚದಲ್ಲಿ ಕೆಸಿ ವ್ಯಾಲಿ ಹಾಗು ಸುಮಾರು ೮೯೨ ಕೋಟಿ ವೆಚ್ಚದಲ್ಲಿ ಎಚ್.ಎನ್ ವ್ಯಾಲಿ ಯೋಜನೆಯನ್ನು ರೂಪಿಸಲಾಗಿತ್ತು. ಮೊದಲನೆ ಹಂತದಲ್ಲಿ ಕೋಲಾರದ ಕೆರೆಗೆ ನೀರನ್ನು ಬಿಟ್ಟಾಗ ಕೆಲವರು ಸತ್ತ ಮೀನು ಸೇರಿದಂತೆ ಹಾವುಗಳನ್ನು ಹಾಕಿ ಜನರಿಗೆ ಕೆಸಿ ವ್ಯಾಲಿ ಯೋಜನೆ ಬಗ್ಗೆ ಕೆಟ್ಟ ಅಭಿಪ್ರಾಯ ಬರುವಂತೆ ಮಾಡಿ ರಾಜ್ಯ ಹೈಕೋರ್ಟ್ ನಲ್ಲಿ ದಾವೆ ಹೂಡಿ ವಿಫಲವಾದ ನಂತರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಇದೀಗ ವೈಜ್ಞಾನಿಕವಾಗಿ ನೀರನ್ನು ಪರೀಕ್ಷಿಸಿದಾಗ ಕೆಸಿ ವ್ಯಾಲಿ ಹಾಗು ಎಚ್.ಎನ್. ವ್ಯಾಲಿ ನೀರು ಪರಿಶುದ್ದವಾಗಿದ್ದು ದಾವೆ ಹೂಡಿದ್ದವರು ಅಗತ್ಯ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸದೇ ಇರುವುದರಿಂದ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದೀಗ ಹಲವು ದಿನಗಳಿಂದ ರೈತರಲ್ಲಿ ಕಾಡುತ್ತಿದ್ದ ನೀರಿನ ಸಮಸ್ಯೆ ತ್ವರಿತವಾಗಿ ಬಗೆಹರಿಯಲಿದ್ದು ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಪ್ರಾರಂಭವಾಗಲಿದೆ. ಇದರಿಂದ ಬಯಲುಸೀಮೆ ಭಾಗದ ರೈತರ ಜೀವನ ಹಸನಾಗಲಿದೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕು ಅಧ್ಯಕ್ಷ ತಾದೂರು ಮಂಜುನಾಥ್, ಉಪಾಧ್ಯಕ್ಷ ಮುನಿನಂಜಪ್ಪ, ಪದಾಧಿಕಾರಿಗಳಾದ ವೇಣುಗೋಪಾಲ್. ರಾಮಕೃಷ್ಣಪ್ಪ, ನರಸಿಂಹಮೂರ್ತಿ, ಬಿ.ವಿ.ಮುನೇಗೌಡ, ಎಸ್.ಎಂ.ನಾರಾಯಣಸ್ವಾಮಿ, ದೇವರಾಜು ಮತ್ತಿತರರು ಹಾಜರಿದ್ದರು.

error: Content is protected !!