24.1 C
Sidlaghatta
Wednesday, July 30, 2025

ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ವರದನಾಯಕನಹಳ್ಳಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು

- Advertisement -
- Advertisement -

ತಾಲ್ಲೂಕಿನ ವರದನಾಯಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಎಚ್.ಎಂ.ಭವ್ಯ ಮತ್ತು ಎಚ್.ಎಂ.ತರುಣ್ ಅವರು ಎನ್‌ಎಂಎಂಎಸ್ ಪ್ರತಿಭಾನ್ವೇಷಣಾ ರಾಷ್ಟ್ರೀಯ ಮಟ್ಟದ ಪರೀಕ್ಷೆಯಲ್ಲಿ ಆಯ್ಕೆಯಾಗಿದ್ದಾರೆ.
ಮುಖ್ಯಶಿಕ್ಷಕ ವಿ.ಎನ್.ಗೋಪಾಲಕೃಷ್ಣಯ್ಯ ಮಾತನಾಡಿ, “ಕೇಂದ್ರ ಸರ್ಕಾರ ನಡೆಸುವ ಎನ್‌ಎಂಎಂಎಸ್ ಪ್ರತಿಭಾನ್ವೇಷಣಾ ರಾಷ್ಟ್ರೀಯ ಮಟ್ಟದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಅಗಳಿಗೆ ಪ್ರತಿ ತಿಂಗಳೂ ಒಂದು ಸಾವಿರ ರೂ ವಿದ್ಯಾರ್ಥಿ ವೇತನ ಲಭಿಸುತ್ತದೆ. ಈ ಮಕ್ಕಳು ದ್ವಿತೀಯ ಪಿಯುಸಿ ಮುಗಿಸುವವರೆಗೂ ಈ ವಿದ್ಯಾರ್ಥಿ ವೇತನ ಅವರ ಖಾತೆಗೆ ಪ್ರತಿ ತಿಂಗಳೂ ಜಮೆ ಆಗುತ್ತದೆ” ಎಂದು ತಿಳಿಸಿದರು.
“ಪ್ರತಿ ವರ್ಷ ಈ ಪರೀಕ್ಷೆಯನ್ನು ಎಂಟನೇ ತರಗತಿಯಲ್ಲಿ ಓದುವ ಆರ್ಥಿಕವಾಗಿ ಹಿಂದುಳಿದ ಕೌಟುಂಬಿಕ ಹಿನ್ನೆಲೆಯ ವಿದ್ಯಾರ್ಥಿಗಳು ಬರೆಯಬಹುದಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಈ ಪರೀಕ್ಷೆಯನ್ನು ಬರೆಯುವ ವಿದ್ಯಾರ್ಥಿಗಳಿಗೆ ತರಬೇತಿ, ಪಠ್ಯ ಪುಸ್ತಕ ಹಾಗೂ ಸ್ಟೈಫಂಡ್ ನೀಡಲಾಗಿತ್ತು. ನಮ್ಮ ಶಾಲೆಯಲ್ಲಿ ಹದಿಮೂರು ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆದಿದ್ದರು. ನಮ್ಮ ಶಾಲೆಯಲ್ಲಿ ಶಿಕ್ಷಕರು ಈ ಮಕ್ಕಳಿಗೆ ಹೆಚ್ಚಿನ ತರಬೇತಿ ನೀಡಿ ಪರೀಕ್ಷೆಗೆ ಸಿದ್ದಪಡಿಸಿದ್ದರು” ಎಂದು ಅವರು ವಿವರಿಸಿದರು.
ಶಿಕ್ಷಕರಾದ ಎಂ.ಎ.ರಾಮಕೃಷ್ಣ, ಎಲ್.ನಾಗಭೂಷಣ್, ಗಂಗಶಿವಪ್ಪ, ಮಂಜುನಾಥರೆಡ್ಡಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!