18.1 C
Sidlaghatta
Saturday, November 15, 2025

ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ

- Advertisement -
- Advertisement -

ತಾಲ್ಲೂಕಿನ ಕನ್ನಮಂಗಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಕನ್ನಮಂಗಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅವರು ಮಾತನಾಡಿದರು.
ವೈಜ್ಞಾನಿಕ ಮನೋಭಾವವನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು. ನಿತ್ಯ ಜೀವನದಲ್ಲಿ ನಡೆಯುವ ಪ್ರತಿಯೊಂದು ಕ್ರಿಯೆಗೂ ವೈಜ್ಞಾನಿಕ ಕಾರಣಗಳಿರುತ್ತವೆ. ವಿಜ್ಞಾನದ ಮೂಲ ಪ್ರಕ್ರಿಯೆ ಆಧಾರದಲ್ಲಿ ಎಲ್ಲ ಕ್ರಿಯೆಗಳು ಜರುಗುತ್ತವೆ ಎಂದು ಅವರು ತಿಳಿಸಿದರು.
ವಿದ್ಯಾರ್ಥಿಗಳು ಪರಿಸರ ಸ್ನೇಹಿ ವೈಜ್ಞಾನಿಕ ಮನೋಭಾವ ಹೊಂದುವ ಮೂಲಕ ಪರಿಸರ ಕಾಪಾಡುವ ಕಾರ್ಯ ಮಾಡಬೇಕು. ವಿಜ್ಞಾನ ಎಂದರೆ ವಿಶಿಷ್ಟವಾದ ಜ್ಞಾನ ಪ್ರತಿಯೊಬ್ಬರು ವೆಜ್ಞಾನಿಕ ಮನೋಭಾವ ಜತೆಗೆ ಪರಿಸರ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಪ್ರಶ್ನೆ ಮಾಡದೆ ಯಾವುದನ್ನು ಒಪ್ಪಿಕೊಳ್ಳಬಾರದು ಎಂದರು.
ಕಾರ್ಯಕ್ರಮದ ಅಂಗವಾಗಿ ಮಕ್ಕಳಿಂದ ವಿಜ್ಞಾನ ಪ್ರಯೋಗಗಳ ಹಾಗೂ ಮಾದರಿಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ವಿಜ್ಞಾನ ಪ್ರಯೋಗ ಮಾಡುವ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ಶಿಕ್ಷಕರಾದ ಜೆ.ಶ್ರೀನಿವಾಸ್, ಕೆ. ಶಿವಶಂಕರ್, ಎಸ್. ಕಲಾಧರ್, ಟಿಜೆ ಸುನೀತಾ, ಎನ್ ಪದ್ಮಾವತಿ ಹಾಗೂ ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಮಂಜುಳಾ ಹಾಜರಿದ್ದರು

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!