ಕೇಶವಾರ ಗ್ರಾಮದಲ್ಲಿ ಯಲಹಕಂದ ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜು ಮತ್ತು ಶ್ರೀನಿವಾಸ ಚಾರಿಟಬಲ್ ಟ್ರಸ್ಟ್ ನ ವತಿಯಿಂದ ರಾಷ್ರೀಯ ಸೇವಾ ಯೋಜನೆ ವಿಶೇಷ ವಾರ್ಷಿಕ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಬೆಂಗಳೂರು ವಿಶ್ವ ವಿದ್ಯಾಲಯದ ಎನ್.ಎಸ್.ಎಸ್ ನ ಸಂಯೋಜನಾಧಿಕಾರಿ ಡಾ.ಆರ್.ಶ್ರೀನಿವಾಸ್ ಮಾತನಾಡಿದರು.
ಯುವಕರಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಸಾಂಘಿಕವಾಗಿ ಸಮಾಜದ ಒಳಿತಿಗಾಗಿ ಯುವಶಕ್ತಿಯ ಸದ್ಭಳಕೆಯಾಗಲಿ ಎಂದು ಅವರು ತಿಳಿಸಿದರು.
ಶ್ರೀನಿವಾಸ ಚಾರಿಟಬಲ್ ಟ್ರಸ್ಟ್ ನ ಸಹಯೋಗದಲ್ಲಿ ಗ್ರಾಮದ ದೇವಾಲಯದ ಆವರಣದಲ್ಲಿ ಶೌಚಾಲಯಗಳ ನಿಮಾರ್ಣಕ್ಕೆ ಗುದ್ದಲಿ ಪೊಜೆ ನಡೆಸುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶವನ್ನು ರವಾನಿಸಿದ್ದೀರಿ. ಸಮಾಜಮುಖಿ ಕಾರ್ಯಗಳ ಮೂಲಕ ಸತ್ಪ್ರಜೆಗಳಾಗಿ ಎಂದರು.
ಈ ಸಂದರ್ಭದಲ್ಲಿ ಶ್ರೀನಿವಾಸ ಚಾರಿಟಬಲ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಮತ್ತು ಎನ್.ಎಸ್.ಎಸ್ ನ ರಾಜ್ಯ ಪ್ರಶಸ್ತಿ ಪುರಸ್ಕತ ಕೇಶವಾರ ನವೀನ್ ಅವರ ನೇತೃತ್ವದಲ್ಲಿ ಗುರುವಂದನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬೆಂಗಳೂರು ವಿಶ್ವವಿದ್ಯಾಲಯ ಎನ್.ಎಸ್.ಎಸ್ ನ ಸಂಯೋಜನಾಧಿಕಾರಿ ಡಾ.ಆರ್.ಶ್ರೀನಿವಾಸ್, ಯಲಹಂಕದ ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ಎನ್.ವೆಂಕಟೇಶ್ ಮತ್ತು ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ನ ಕಾರ್ಯಕ್ರಮಾಧಿಕಾರಿ ಎನ್.ಟಿ.ತಿಮ್ಮಪ್ಪ ಅವರನ್ನು ಗೌರವಿಸಲಾಯಿತು.
ಎನ್.ಎಸ್.ಎಸ್ ರಾಜ್ಯ ಪ್ರಶಸ್ತಿ ವಿಜೇತ ಡೊಳ್ಳು ಕುಣಿತ ಕಲಾವಿದ ಡಾ.ಎ.ಎಸ್.ಚಂದ್ರಕುಮಾರ್, ಸಂತೋಷ, ಕೇಶವಾರ ಗ್ರಾಮ ಪಂಚಾಯಿತಿ ಸದ್ಯಸ್ಯ ಕೆ.ಎಸ್. ಚಂದ್ರಶೇಖರ್, ಚೈತ್ರಾ ಮುರಳಿಧರ್, ಕೆ.ಟಿ.ಮಂಜುನಾಥ್, ನಾರಾಯಣಸ್ವಾಮಿ, ಭರತ್, ರಾಕೇಶ್, ಕೇಶವಾರ ಗ್ರಾಮಸ್ಥರು ಹಾಜರಿದ್ದರು.