Home News ರೀಲರುಗಳಿಂದ ಮನವಿಪತ್ರ ಸಲ್ಲಿಕೆ

ರೀಲರುಗಳಿಂದ ಮನವಿಪತ್ರ ಸಲ್ಲಿಕೆ

0

ನಗರದ ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ರೇಷ್ಮೆ ಗೂಡನ್ನು ಖರೀದಿಸದೆ ಮಾರುಕಟ್ಟೆಯ ಹೊರಗೆ ರೀಲರುಗಳು ಧರಣಿ ಕುಳಿತಿರುವುದು ಐದನೇ ದಿನವಾದ ಶುಕ್ರವಾರವೂ ಮುಂದುವರೆದಿದ್ದು, ರೀಲರುಗಳು ಅನುಭವಿಸುತ್ತಿರುವ ತೊಂದರೆಗಳ ಬಗ್ಗೆ ರೇಷ್ಮೆ ಇಲಾಖೆಯ ಆಯುಕ್ತರಿಗೆ, ಮಾರುಕಟ್ಟೆಯ ಉಪನಿರ್ದೇಶಕ ರತ್ನಯ್ಯಶೆಟ್ಟಿ ಮುಖಾಂತರ ಮನವಿ ಪತ್ರ ಸಲ್ಲಿಸಿದರು.
ಕಳೆದ ಐದು ದಿನಗಳಿಂದ ಇ–ಹರಾಜು ನಿಲ್ಲಿಸುವಂತೆ ಒತ್ತಾಯಿಸಿ ರೀಲರುಗಳು ರೇಷ್ಮೆ ಗೂಡಿನ ಮಾರುಕಟ್ಟೆಯ ಹೊರಗೆ ಧರಣಿ ನಡೆಸುತ್ತಿದ್ದೇವೆ. ಇದಕ್ಕೆ ಜಿಲ್ಲಾಡಳಿತ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಅದು ರಾಜ್ಯ ಸರ್ಕಾರದ ತೀರ್ಮಾನವೆಂದು ಕೈಚೆಲ್ಲಿದ್ದಾರೆ. ನಮಗೆ ದಿನನಿತ್ಯದ ಊಟಕ್ಕೂ ತೊಂದರೆಯಾಗಿದೆ. ಕೆಲವು ಮಂದಿ ರೈತರು ಇ–ಹರಾಜು ಬೇಕೆಂದು ರೇಷ್ಮೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿರುವುದು ನಮ್ಮನ್ನು ಮತ್ತಷ್ಟು ಆತಂಕಕ್ಕೆ ಈಡು ಮಾಡಿದೆ. ಮಾನವೀಯ ದೃಷ್ಟಿಯಿಂದ ಈ ಕೂಡಲೇ ಇ–ಹರಜು ಸ್ಥಗಿತಗೊಳಿಸಿ, ರೀಲರುಗಳ ಬವಣೆಯನ್ನು ರಾಜ್ಯ ಸರ್ಕಾರದ ಗಮನಕ್ಕೆ ತರಬೇಕೆಂದು ಕೋರಿದ್ದಾರೆ.
ರೀಲರುಗಳಾದ ಜಿ.ರೆಹಮಾನ್, ಸಮೀವುಲ್ಲಾ, ಅಕ್ಮಲ್ಪಾಷ, ಎ.ಆರ್.ಅಬ್ದುಲ್ ಅಜೀಜ್, ಮಂಜು, ರಾಮಕೃಷ್ಣ, ರಮೇಶ್, ಗಣೇಶ್, ರವಿ, ಯೂಸುಫ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

error: Content is protected !!