26.3 C
Sidlaghatta
Sunday, March 1, 2026

ರೇಣುಕಾ ಎಲ್ಲಮ್ಮ ಹೂವಿನ ಕರಗ

- Advertisement -
- Advertisement -

ಪುರಾಣ ಪ್ರಸಿದ್ಧ ರೇಣುಕಾ ಎಲ್ಲಮ್ಮ ದೇವಿಯ ಹೂವಿನ ಕರಗಮಹೋತ್ಸವ ಸೋಮವಾರ ರಾತ್ರಿ ವಿಜೃಂಭಣೆಯಿಂದ ನೆರವೇರಿತು.
ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ವಿಜೃಂಭಣೆಯಿಂದ ನಡೆಸಲಾದ ಕರಗ ಮಹೋತ್ಸವದಲ್ಲಿ ಮುನಿಕೃಷ್ಣಪ್ಪ ಅವರು ಕರಗವನ್ನು ಹೊತ್ತಿದ್ದು, ಕರಗದ ಅಂಗವಾಗಿ ನಗರದ ಶ್ರೀರಾಮ ದೇವಸ್ಥಾನದ ಮುಂಭಾಗದಲಿ ಆರ್ಕೆಸ್ಟ್ರಾ ಮತ್ತು ವಿವಿಧ ಮನರಂಜನೆಯ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಕೋಟೆ ವೃತ್ತದಲ್ಲಿ ಭಕ್ತರಿಗೆಲ್ಲ ಅನ್ನಸಂತರ್ಪಣೆಯನ್ನು ನಡೆಸಿದರು.
ಕರಗದ ಸ್ವಾಗತಕ್ಕಾಗಿ ಪ್ರತಿ ಮನೆಯವರೂ ಮನೆ ಮುಂದೆ ಸಾರಿಸಿ ರಂಗೋಲಿಯನ್ನು ಹಾಕಿದ್ದರು. ಕರಗ ಬಂದಾಗ ಆರತಿ ಬೆಳಗಿ ಮಲ್ಲಿಗೆ ಹೂವನ್ನು ಅರ್ಪಿಸಿದರು. ಕರಗ ಮಹೋತ್ಸವವನ್ನು ನೋಡಲು ಸುತ್ತಮುತ್ತಲ ಗ್ರಾಮಗಳಿಂದ ಆಗಮಿಸಿದ್ದ ಸಾವಿರಾರು ಮಂದಿ ಕರಗದ ನರ್ತನಕ್ಕೆ ಚಪ್ಪಾಳೆ, ಶಿಳ್ಳೆಗಳ ಮುಖಾಂತರ ತಮ್ಮ ಸಂತಸವನ್ನು ವ್ಯಕ್ತಪಡಿಸಿದರು.
ರೇಣುಕಾ ಎಲ್ಲಮ್ಮ ದೇವಾಲಯದಿಂದ ಹೊರಟ ಕರಗ ನಗರದ ಓ.ಟಿ.ವೃತ್ತ, ಕೋಟೆ ವೃತ್ತಗಳು ಸೇರಿದಂತೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಪೂಜೆಗಳನ್ನು ಸ್ವೀಕರಿಸಿತು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!