20.3 C
Sidlaghatta
Friday, July 18, 2025

ರೇಣುಕಾ ಯಲ್ಲಮ್ಮದೇವಿಯ ಹೂವಿನ ಕರಗ ಮಹೋತ್ಸವ

- Advertisement -
- Advertisement -

ನಗರದಲ್ಲಿ ಶ್ರೀ ರೇಣುಕಾ ಯಲ್ಲಮ್ಮದೇವಿಯ ಹೂವಿನ ಕರಗವು ಮಂಗಳವಾರ ರಾತ್ರಿ ವಿಜೃಂಭಣೆಯಿಂದ ನಡೆಯಿತು.
ಕರಗ ಮಹೋತ್ಸವದ ಅಂಗವಾಗಿ ಮಂಗಳವಾರ ಮಧ್ಯಾಹ್ನ ದೇವರಿಗೆ ಕಲ್ಯಾಣೋತ್ಸವ, ಸಂಜೆ ದಾಸಯ್ಯನವರ ಮಣಿಸೇವೆ. ನಂತರ ಕರಗ ಹೊರುವವರನ್ನು ಬಾವಿಯ ಬಳಿ ಕರೆದೊಯ್ದು ಗಂಗೆ ಪೂಜೆ ಮಾಡಿಸಿದ ನಂತರ ಮಧ್ಯರಾತ್ರಿ ಕರಗಕ್ಕೆ ಪೂಜೆ ಸಲ್ಲಿಸಿ ತಲೆಯ ಮೇಲೆ ಹೊರಿಸಲಾಯಿತು. ಆಗ ವೀರಕುಮಾರರು ಅಲಗು ಸೇವೆ ಮಾಡಿದರು. ಹಲಗೆ, ತಮಟೆ ವಾದ್ಯಗಳೊಂದಿಗೆ ಕರಗ ದೇವಾಲಯದ ಪ್ರದಕ್ಷಿಣೆ ಮಾಡಿ ನರ್ತಿಸಿತು. ಮುಂದೆ ಕತ್ತಿ ಹಿಡಿದ ವೀರಕುಮಾರರು, ಹಿಂದೆ ಕುಣಿಯುತ್ತಾ ಕರಗ ರಾತ್ರಿಯಿಡೀ ಊರೆಲ್ಲಾ ಸಂಚರಿಸಿತು. ಪ್ರತಿಯೊಬ್ಬರೂ ತಮ್ಮ ಮನೆಗಳ ಮುಂದೆ ರಂಗೋಲಿ ಹಾಕಿ ಅಲ್ಲಿಗೆ ಕರಗ ಬರುತ್ತಿದ್ದಂತೆ ಭಕ್ತಿಯಿಂದ ಆರತಿ ಬೆಳಗಿ ಮಲ್ಲಿಗೆ ಹೂಗಳನ್ನು ಸಮರ್ಪಿಸಿದರು.
ಊರಿನ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ, ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಪ್ರಮುಖ ಬೀದಿಗಳಲ್ಲೂ ವಿದ್ಯುತ್ ದೀಪಾಲಂಕಾರ ಹಾಗೂ ನಗರದ ಬಸ್ ನಿಲ್ದಾಣ ಹಾಗು ಅಶೋಕ ರಸ್ತೆ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದ ಮುಂಬಾಗದಲ್ಲಿ ವಾದ್ಯಗೋಷ್ಠಿಯನ್ನೂ ಆಯೋಜಿಸಲಾಗಿತ್ತು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!