ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಸಂಘವನ್ನು ಚುರುಕುಗೊಳಿಸುವ ಉದ್ದೇಶದಿಂದ ಈ ಹಿಂದೆ ಇದ್ದ ಸಮಿತಿಯನ್ನು ವಿಸರ್ಜಿಸಿ ನೂತನ ಶಿಡ್ಲಘಟ್ಟ ತಾಲ್ಲೂಕು ಶಾಖೆಯನ್ನು ರೂಪಿಸುತ್ತಿರುವುದಾಗಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪುಟ್ಟಣ್ಣನವರ ಬಣದ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಲಕ್ಷ್ಮೀನಾರಾಯಣರೆಡ್ಡಿ ತಿಳಿಸಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪುಟ್ಟಣ್ಣನವರ ಬಣದ ಜಿಲ್ಲಾ ಘಟಕದ ವತಿಯಿಂದ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ರೇಷ್ಮೆ ಗೂಡಿಗೆ ಸರ್ಕಾರದಿಂದ 350 ರೂಪಾಯಿಗಳ ಬೆಲೆ ನಿಗದಿಗೊಳಿಸಬೇಕು. ಅದಕ್ಕಿಂತ ಕಡಿಮೆಯಾದಲ್ಲಿ ಸರ್ಕಾರ ಸಹಾಯಧನ ನೀಡಬೇಕು. ಬಯಲುಸೀಮೆ ಪ್ರದೇಶಗಳಾದ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಹೈನುಗಾರಿಕೆಗೆ ಸಾಕಷ್ಟು ತೊಂದರೆಗಳಿವೆ. ಅವನ್ನು ನಿವಾರಿಸಲು ಕ್ರಮ ಕೈಗೊಳ್ಳುವುದರೊಂದಿಗೆ ಹಾಲಿನ ಬೆಲೆ ಲೀಟರ್ಗೆ 30 ರೂಪಾಯಿ ನಿಗದಿಗೊಳಿಸಬೇಕು. ರೈತರ ಮೋಟರ್ ಪಂಪ್ಸೆಟ್ಗಳಿಗೆ ಬೆಸ್ಕಾಂ ಮೀಟರ್ ಅಳವಡಿಸುವುದನ್ನು ನಿಲ್ಲಿಸಬೇಕು. ರೈತ ದಿನಾಚರಣೆಗೆ ರಜಾ ಘೋಷಿಸಬೇಕು. ರಾಜಕೀಯ ಮುಖಂಡರು ಶಾಶ್ವತ ನೀರಾವರಿ ವಿಚಾರದಲ್ಲಿ ಸುಳ್ಳಿ ಭರವಸೆಗಳನ್ನು ನೀಡುವುದನ್ನು ನಿಲ್ಲಿಸಿ ರೈತರೊಂದಿಗೆ ಹೋರಾಟಕ್ಕಿಳಿಯಬೇಕು. ಎಲ್ಲಾ ಸಂಘ ಸಂಸ್ಥೆಗಳೂ ಒಗ್ಗೂಡಿ ಶಾಶ್ವತ ನೀರಾವರಿಗೆ ಹೋರಾಡಬೇಕೆಂದು ಹೇಳಿದರು.
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪುಟ್ಟಣ್ಣನವರ ಬಣದ ಜಿಲ್ಲಾ ಘಟಕದ ಉಪಾಧ್ಯಕ್ಷ ಮುನಿಕೆಂಪಣ್ಣ, ಟಿ.ಆರ್.ನಾರಾಯಣಸ್ವಾಮಿ, ತಾಲ್ಲೂಕು ಅಧ್ಯಕ್ಷ ಎಸ್.ಎಂ.ರವಿಪ್ರಕಾಶ್, ಗೌರವಾಧ್ಯಕ್ಷ ಶಂಕರಪ್ಪ, ಕಾರ್ಯದರ್ಶಿ ನಾಗರಾಜು, ಉಪಾಧ್ಯಕ್ಷ ಡಿ.ವಿ.ನಾರಾಯಣಸ್ವಾಮಿ, ನಾಗರಾಜು, ಸುರೇಶ್, ರಾಮಮೂರ್ತಿ, ಬೈರಪ್ಪ, ಬಾಲಮುರಳಿ, ಹನುಮಂತಯ್ಯ, ಮುನೇಗೌಡ, ಆಂಜಿನಪ್ಪ, ಮುರಳಿ, ಮುನಿಶಾಮಗೌಡ, ನಾಗೇಶ್, ಚಂದ್ರಶೇಖರ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -