21.7 C
Sidlaghatta
Monday, July 7, 2025

ರೈತ ಸಂಘದಿಂದ ಪ್ರತಿಭಟನಾ ಕಾರ್ಯಕ್ರಮ

- Advertisement -
- Advertisement -

ಕೆ.ಎಸ್‌.ಪುಟ್ಟಣ್ಣಯ್ಯನವರ ಸ್ಮರಣಾರ್ಥವಾಗಿ ‘ತಿಥಿ ಬಿಡಿ, ಸಸಿ ನೆಡಿ’ ಕಾರ್ಯಕ್ರಮ ಹಾಗೂ ರೈತರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ತಾಲ್ಲೂಕು ಕಚೇರಿ ಮುಂದೆ ‘ಪ್ರತಿಭಟನಾ ಕಾರ್ಯಕ್ರಮ’ ವನ್ನು ಸೋಮವಾರ ರೈತ ಸಂಘದ ಸದಸ್ಯರು ಹಮ್ಮಿಕೊಂಡಿದ್ದರು.
ನಗರದ ಬಸ್‌ ನಿಲ್ದಾಣದ ಬಳಿಯ ರೇಷ್ಮೆ ಇಲಾಖೆಯ ಕಚೇರಿಯ ಆವರಣದಲ್ಲಿ ಗಿಡವನ್ನು ನೆಟ್ಟು ರೈತರ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಒತ್ತಾಯಿಸಿ ಪ್ರಮುಖ ರಸ್ತೆಯಲ್ಲಿ ಘೋಷಣೆಗಳೊಂಡಿಗೆ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದರು.
ಈ ಸಂದರ್ಭದಲ್ಲಿ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಎಸ್‌.ಎಂ. ರವಿಪ್ರಕಾಶ್‌ ಮಾತನಾಡಿ, ‘ನಮ್ಮ ಹಲವು ಹಕ್ಕೊತ್ತಾಯಗಳಿವೆ. ತಾಲ್ಲೂಕಿನಾದ್ಯಂತ ಕೆರೆಗಳಲ್ಲಿನ ಜಾಲಿ ಮರಗಳನ್ನು ತೆಗೆಸಬೇಕು. ರಾಜಕಾಲುವೆಗಳನ್ನು ತೆರವುಗೊಳಿಸಬೇಕು. ಕೆರೆಗಳ ಹೂಳು ತೆಗೆಸಿ ಒತ್ತುವರಿಯನ್ನು ತೆರವುಗೊಳಿಸಬೇಕು. ರೈತರ ವಿಮೆಯ ಬಾಕಿ ಹಣವನ್ನು ತಕ್ಷಣ ನೀಡಬೇಕು. ಸಾಗುವಳಿ ಚೀಟಿಗಳನ್ನು ವಿತರಣೆ ಮಾಡಬೇಕು. ಶಿಡ್ಲಘಟ್ಟದಲ್ಲಿ ಎ.ಪಿ.ಎಂ.ಸಿ.ಮಾರುಕಟ್ಟೆಯನ್ನು ಸ್ಥಾಪಿಸಬೇಕು. ರೈತ ಭವನ ಮಂಜೂರು ಮಾಡಬೇಕು. ಸಮರ್ಪಕವಾಗಿ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಆಗಬೇಕು. ಜನ ಜಾನುವಾರುಗಳಿಗೆ ಬೇಸಿಗೆಯಲ್ಲಿ ಕುಡಿಯುವ ನೀರನ್ನು ಒದಗಿಸಲು ಕ್ರಮವಹಿಸಬೇಕು. ರೇಷ್ಮೆ ಇಲಾಖೆಯಲ್ಲಿ ಹನಿನೀರಾವರಿ ಸಹಾಯಧನ ನೀಡಬೇಕು. ಪ್ಯೂಪದ ದುರ್ವಾಸನೆಯಿಂದ ಸಾಂಕ್ರಾಮಿಕ ರೋಗ ಹರಡುತ್ತಿದ್ದು ಕ್ರಮ ಕೈಗೊಳ್ಳಬೇಕು ಮುಂತಾದ ಹಲವು ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಲಾಗುತ್ತಿದೆ’ ಎಂದು ವಿವರಿಸಿದರು.
ಮನವಿ ಪತ್ರವನ್ನು ಗ್ರೇಡ್‌ 2 ತಹಶೀಲ್ದಾರ್‌ ಮುನಿಕೃಷ್ಣಪ್ಪ ಅವರಿಗೆ ಸಲ್ಲಿಸಿದರು.
ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ಎಸ್‌.ವೆಂಕಟಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಮುನಿಕೆಂಪಣ್ಣ, ಶಂಕರಪ್ಪ, ಮಾರುತಿ, ಅರುಣ್‌ಕುಮಾರ್‌, ಭಕ್ತರಹಳ್ಳಿ ಪ್ರತೀಶ್‌, ಕೋಟೆ ಚನ್ನೇಗೌಡ, ಡಿ.ವಿ.ನಾರಾಯಣಸ್ವಾಮಿ, ಗೋವಿಂದಪ್ಪ, ರಮೇಶ್‌, ನಟರಾಜ್‌, ಶ್ರೀಧರ್‌, ಮುನಿರಾಜು, ಕದಿರೇಗೌಡ, ಹುಸೇನ್‌ಸಾಬ್‌ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!