ತಾಲ್ಲೂಕಿನ ಎಲ್ಲಾ ವರ್ತಕರ ಸಮುದಾಯದಿಂದ ಶನಿವಾರದಂದು ಚಿಕ್ಕಬಳ್ಳಾಪುರದ ಚದಲಪುರದ ಬಳಿ ನಡೆಯುತ್ತಿರುವ ಶಾಶ್ವತ ನೀರಾವರಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಬೈಕ್ ರ್ಯಾಲಿಯನ್ನು ಆಯೋಜಿಸಲಾಗಿತ್ತು.
ನಗರದ ಅರಳೇಪೇಟೆಯ ಬಸವೇಶ್ವರ ದೇವಾಲಯದ ಆವರಣದಿಂದ ಪ್ರಾರಂಭಿಸಿ ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿಯನ್ನು ನಡೆಸಿದ ವರ್ತಕರು ತಾಲ್ಲೂಕು ಕಚೇರಿಯ ಬಳಿ ಶಿರಸ್ತೇದಾರ್ ನರೇಂದ್ರಬಾಬು ಅವರಿಗೆ ಮನವಿ ಸಲ್ಲಿಸಿದರು. ನಂತರ ಚಿಕ್ಕಬಳ್ಳಾಪುರದ ಚದಲಪುರದ ಬಳಿ ನಡೆಯುತ್ತಿರುವ ಶಾಶ್ವತ ನೀರಾವರಿ ಹೋರಾಟದ ಸ್ಥಳಕ್ಕೆ ನೂರಾರು ಬೈಕುಗಳಲ್ಲಿ ತೆರಳಿದರು.
ತಾಲ್ಲೂಕು ಔಷಧಿ ವ್ಯಾಪಾರಿಗಳ ಸಂಘ, ಚಿನ್ನ ಬೆಳ್ಳಿ ವರ್ತಕರ ಸಂಘ, ದಿನಸಿ ವರ್ತಕರ ಸಂಘ, ಸಗಟು ವಿತರಕರ ಸಂಘ, ಪತಂಜಲಿ ಯೋಗ ಶಿಕ್ಷಣ ಸಂಘ, ಛಾಯಾಗ್ರಾಹಕರ ಸಂಘ, ಜವಳಿ ವ್ಯಾಪಾರಿಗಳ ಸಂಘ, ಫ್ಯಾನ್ಸಿ ಸ್ಟೋರ್ಸ್ಗಳ ಸಂಘ, ಸವಿತಾ ಸಮುದಾಯ ಸಂಘ, ರಸಗೊಬ್ಬರ ವ್ಯಾಪಾರಿಗಳ ಸಂಘ, ಪೇಂಟ್ಸ್ ಮತ್ತು ಹಾರ್ಡ್ವೇರ್ ಸಂಘ, ಹೋಟೆಲ್ ಮಾಲೀಕರ ಸಂಘ, ರಸ್ತೆ ಬದಿ ವ್ಯಾಪಾರಿಗಳ ಸಂಘದ ಸದಸ್ಯರು ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.
- Advertisement -
- Advertisement -
- Advertisement -
- Advertisement -