Home News ವಾಲ್ಮೀಕಿಯವರ ಆದರ್ಶಗಳನ್ನು ಜೀವನದಲ್ಲಿ ರೂಡಿಸಿಕೊಳ್ಳಬೇಕು

ವಾಲ್ಮೀಕಿಯವರ ಆದರ್ಶಗಳನ್ನು ಜೀವನದಲ್ಲಿ ರೂಡಿಸಿಕೊಳ್ಳಬೇಕು

0

ಕೌಟುಂಬಿಕ ಜೀವನ ಮೌಲ್ಯಗಳನ್ನೊಳಗೊಂಡ ಮಹಾಕಾವ್ಯ ರಾಮಾಯಣ ಕೃತಿಯ ಮೂಲಕ ಸಮಾಜದಲ್ಲಿನ ಪ್ರತಿಯೊಬ್ಬ ಮಾನವನು ಸನ್ಮಾರ್ಗವನ್ನು ಕಾಣುವಂತಹ ಅವಕಾಶವನ್ನು ಮಹರ್ಷಿ ವಾಲ್ಮೀಕಿ ಅವರು ಒದಗಿಸಿಕೊಟ್ಟಿದ್ದಾರೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಬಿ.ಸಿ.ನಂದೀಶ್ ಹೇಳಿದರು.
ನಗರದ ಚಿಂತಾಮಣಿ ರಸ್ತೆಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.
ಸಮಾಜದಲ್ಲಿನ ಮೌಡ್ಯತೆಯನ್ನು ತೊಲಗಿಸಿ, ಜನರ ಮನದಾಳದ ಅಂಧಕಾರವನ್ನು ತೊಲಗಿಸುವ ನಿಟ್ಟಿನಲ್ಲಿ ಜನಿಸಿದ ಅನೇಕ ಮಂದಿ ಸಾಧು, ಸಂತರು, ದಾರ್ಶನಿಕರು, ಕವಿಗಳು, ಸಾಹಿತಿಗಳಿಗೆಲ್ಲಾ ಮಾರ್ಗದರ್ಶನ ಮಾಡುವಂತಹ ರೀತಿಯಲ್ಲಿ ಸಂತರಾಗಿ, ದಾರ್ಶನಿಕ ಕವಿಗಳಾಗಿ ಕಠೋರವಾದ ಮನಸ್ಥಿತಿಗಳನ್ನು ಪರಿವರ್ತನೆ ಮಾಡುವಂತಹ ವ್ಯಕ್ತಿತ್ವವನ್ನು ರೂಪಿಸಿಕೊಂಡಿದ್ದ ಮಹರ್ಷಿ ವಾಲ್ಮೀಕಿಯವರ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ರೂಡಿಸಿಕೊಳ್ಳಬೇಕು ಎಂದರು.
ಮುಖಂಡ ಡಿ.ಆರ್.ಶಿವಕುಮಾರಗೌಡ ಮಾತನಾಡಿ ಒಂದು ಆದರ್ಶ ಕುಟುಂಬದಲ್ಲಿನ ಉತ್ತಮವಾದ ಸಂಬಂಧಗಳನ್ನು ಕುರಿತು, ಆದರ್ಶ ರಾಜನ ನಡುವಳಿಕೆ, ಹಾಗೂ ಆದರ್ಶ ಪತ್ನಿಯ ಕರ್ತವ್ಯಗಳನ್ನು ಸಮಾಜಕ್ಕೆ ಸಾರಿ ಹೇಳುವ ರೀತಿಯಲ್ಲಿ ರಾಮಾಯಣ ರಚನೆ ಮಾಡಿರುವ ಮಹರ್ಷಿವಾಲ್ಮೀಕಿಯವರ ತತ್ವ ಆದರ್ಶಗಳನ್ನು ಯುವಜನತೆ ಅಳವಡಿಸಿಕೊಳ್ಳಬೇಕು. ಯುವಜನತೆ ವ್ಯಸನಗಳಿಂದ ದೂರವಾಗಿ ಇಂತಹ ಮಹಾಕಾವ್ಯಗಳನ್ನು ಓದುವುದನ್ನು ರೂಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಕಂಬದಹಳ್ಳಿ ಸುರೇಂದ್ರಗೌಡ, ಸುಜಾತಮ್ಮ, ಶ್ರೀಧರ್, ಮುನಿಕೃಷ್ಣಪ್ಪ, ಅಶ್ಫಕ್ ಅಹಮ್ಮದ್ ಮತ್ತಿತರರು ಹಾಜರಿದ್ದರು.
 

error: Content is protected !!