25.8 C
Sidlaghatta
Friday, February 20, 2026

ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

- Advertisement -
- Advertisement -

ಮಕ್ಕಳ ಕಲಿಕೆಯನ್ನು ಉತ್ತಮಗೊಳಿಸಲು, ಸಂತಸದಿಂದ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಅನುಕೂಲವಾಗುವಂತೆ ಪುಸ್ತಕವನ್ನು ರೂಪಿಸಿ ಮಕ್ಕಳಿಗೆ ಉಚಿತವಾಗಿ ವಿತರಿಸುತ್ತಿರುವುದಾಗಿ ಪ್ರಣತಿ ವೇದಿಕೆಯ ಸದಸ್ಯೆ ಉಷಾ ತಿಳಿಸಿದರು.
ತಾಲ್ಲೂಕಿನ ದಿಬ್ಬೂರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ಶಾಲಾ ವಿದ್ಯಾರ್ಥಿಗಳಿಗೆ ಕಲಿಕಾ ಪೂರಕ ಪುಸ್ತಕಗಳನ್ನು ವಿತರಿಸಿ ಅವರು ಮಾತನಾಡಿದರು.
ಪ್ರಣತಿ ವೇದಿಕೆಯಿಂದ ಪ್ರತಿ ವರ್ಷ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಗುತ್ತಿತ್ತು. ಆದರೆ ಈ ಬಾರಿಯಿಂದ ಮಕ್ಕಳ ಜ್ಞಾನ ಹೆಚ್ಚಿಸಲು, ತರ್ಕ, ಗಮನಿಸುವಿಕೆ ಮುಂತಾದ ಮೂಲಾಂಶಗಳನ್ನು ಕಲಿಯಲು ಅನುಕೂಲವಾಗುವಂತೆ ‘ಖುಷಿಯಿಂದ ಕಲಿ’ ಎಂಬ ಪುಸ್ತಕವನ್ನು ರೂಪಿಸಿದ್ದೇವೆ. ಒಂದರಿಂದ ಮೂರನೇ ತರಗತಿಯವರಿಗೆ ಮತ್ತು ನಾಲ್ಕರಿಂದ ಏಳನೇ ತರಗತಿಯವರಿಗೆ ಅನುಕೂಲವಾಗುವ ಹಾಗೆ ಎರಡು ರೀತಿಯ ಪುಸ್ತಕಗಳನ್ನು ರೂಪಿಸಲಾಗಿದೆ. ಶಿಕ್ಷಕರು ಮಕ್ಕಳಿಗೆ ನೆರವಾಗಿ ಸಂತಸದಿಂದ ಕಲಿಯಲು ಪ್ರೋತ್ಸಾಹಿಸುವಂತೆ ಕೋರಿದರು.
ಶಾಲೆಯ ಮುಖ್ಯ ಶಿಕ್ಷಕಿ ಉಮಾ, ಸಹಶಿಕ್ಷಕಿ ಹೇಮಾವತಿ ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!