ಭವಿಷ್ಯವನ್ನು ಸಮರ್ಥವಾಗಿ ಎದುರಿಸಲು ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಕಷ್ಟ ಪಟ್ಟು ಓದಬೇಕು ಎಂದು ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಹೇಳಿದರು.
ತಾಲ್ಲೂಕಿನ ಜಂಗಮಕೋಟೆ ಕ್ರಾಸ್ನ ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಸಂಸ್ಥಾಪಕ ಬಿ.ಎಂ.ಮೂರ್ತಿ ಸ್ಮರಣಾರ್ಥ ಶನಿವಾರ ಏರ್ಪಡಿಸಲಾಗಿದ್ದ ಜ್ಞಾನಕಾರಂಜಿ ೨೦೧೫–೧೬ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜೀವನದ ಪ್ರತಿಯೊಂದು ಕ್ಷಣವೂ ಅಮೂಲ್ಯ. ಕಳೆದು ಹೋದ ಕ್ಷಣ ಮತ್ತೆ ಬರುವುದಿಲ್ಲ. ಗುರಿಯಿಟ್ಟುಕೊಂಡು ಸಾಧನೆ ಮಾಡುವ ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಸ್ಥಾನ ಅಲಂಕರಿಸುತ್ತಾರೆ ಎಂದರು.
ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ವಿದ್ಯಾಸಂಸ್ಥೆಯೊಂದನ್ನು ಕಟ್ಟಿ ಬೆಳೆಸುವುದು ಕಷ್ಟವೇ ಸರಿ. ಇಂತಹ ಪರಿಸ್ಥಿತಿಯಲ್ಲೂ ಎಲ್ಲ ರೀತಿಯ ಸೌಲಭ್ಯಗಳೊಂದಿಗೆ ಒಳ್ಳೆಯ ವಾತಾವರಣದಲ್ಲಿ ಉತ್ತಮ ಶಿಕ್ಷಣವನ್ನು ನೀಡುತ್ತಿರುವ ಈ ವಿದ್ಯಾ ಸಂಸ್ಥೆಯ ಕಾರ್ಯ ಶ್ಲಾಘನೀಯಎಂದು ಆಡಳಿತ ಮಂಡಳಿ, ಶಿಕ್ಷಕ ಸಿಬ್ಬಂದಿಯನ್ನು ಅವರು ಅಭಿನಂದಿಸಿದರು.
ರವಿ ಪುರಸ್ಕಾರ್ ರಾಷ್ಟ್ರೀಯ ಪ್ರಶಸ್ತಿ ವಿಜೇತ ವ್ಯಕ್ತಿತ್ವ ತರಬೇತುದಾರ ಆರ್.ಎ.ಚೇತನ್ಕುಮಾರ್ ಮಾತನಾಡಿ, ಶಾಲಾ ಮಕ್ಕಳು ಕೇವಲ ಪಾಠ, ಪ್ರವಚನಕ್ಕೆ ಮಾತ್ರವೇ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಮೆದುಳನ್ನು ಸದಾ ಕ್ರಿಯಾಶೀಲವಾಗಿರುವಂತೆ ಮಾಡುವ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಯ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಸಹಕಾರಿಯಾಗುತ್ತವೆ. ವಿದ್ಯಾರ್ಥಿಗಳು ಓದುವುದು, ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿ ಆ ನಂತರ ಒಂದು ಉದ್ಯೋಗ ಪಡೆಯುವುದೆ ಗುರಿ ಎಂದು ಭಾವಿಸದೆ ಪ್ರಚಲಿತ ವಿದ್ಯಮಾನಗಳ ಬಗ್ಗೆ ಗಮನಹರಿಸಿಬೇಕು. ಇದರಿಂದ ಸಾಮಾಜಿಕ ಕಳಕಳಿ ಭಾವನೆ ಬೆಳೆಯಲು ಕಾರಣವಾಗುತ್ತದೆ. ನಮ್ಮ ನಡೆ, ನುಡಿ, ಕಾರ್ಯವೈಖರಿ ಇನ್ನೊಬ್ಬರಿಗೆ ಮಾದರಿಯಾಗುವಂತೆ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಂಡು ಜೀವನವನ್ನು ಸಾರ್ಥಕಪಡಿಸಿಕೊಳ್ಳಬೇಕು ಎಂದರು.
ಶಾಲೆಯ ಶೈಕ್ಷಣಿಕ ಆಡಳಿತಾಧಿಕಾರಿ ಮನುಶ್ರೀ ರಾಜೀವ್ಕುಮಾರ್ ಶಾಲೆಯ ವರದಿಯನ್ನು ಮಂಡಿಸಿದರು.
ನಂದಿನಿ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಕೆ.ಗುಡಿಯಪ್ಪ, ಗ್ರಾಮೀಣ ವಿದ್ಯಾಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ಬಿ.ಎಂ.ರಾಜೀವ್ಕುಮಾರ್, ಸಂಪನ್ಮೂಲ ವ್ಯಕ್ತಿ ಎಚ್.ಚಂದ್ರಶೇಖರ್, ಮುಖ್ಯ ಶಿಕ್ಷಕ ಎನ್.ಲಕ್ಷ್ಮಣಪ್ಪ, ಎಂ,ಕೆ.ಅಂಜನಾಮೂರ್ತಿ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -