23.6 C
Sidlaghatta
Monday, March 2, 2026

ವಿದ್ಯಾರ್ಥಿಗಳ ಮೌನ ಪ್ರತಿಭಟನಾ ಮೆರವಣಿಗೆ

- Advertisement -
- Advertisement -

ಪಾಕಿಸ್ತಾನದ ಪೆಶಾವರದಲ್ಲಿ ಸೈನಿಕ ಶಾಲೆಯ ವಿದ್ಯಾರ್ಥಿಗಳ ಮೇಲಿನ ಹತ್ಯಾಕಾಂಡ ಖಂಡಿಸಿ ಶುಕ್ರವಾರ ಎಸ್‌.ಎಫ್‌.ಐ ಮತ್ತು ಡಿ.ವೈ.ಎಫ್‌.ಐ ಸಂಘಟನೆಗಳ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮೌನ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಉಗ್ರಗಾಮಿಗಳು ಪೆಶಾವರದ ಸೈನಿಕ ಶಾಲೆಯಲ್ಲಿ ಅಮಾಯಕ 132 ಮಕ್ಕಳನ್ನು ಕೊಂದಿರುವುದು ಅತ್ಯಂತ ಹೀನಾಯ ಕೃತ್ಯವಾಗಿದೆ. ಇದರಿಂದ ಇಡೀ ವಿಶ್ವವೇ ಬೆಚ್ಚಿ ಬಿದ್ದಿದ್ದು, ಎಲ್ಲಾ ದೇಶಗಳಿಗೂ ಇದು ಆತಂಕಕಾರಿ ಸಂಗತಿಯಾಗಿದೆ. ವಿಕೃತ ಮನಸ್ಸಿನ ಉಗ್ರರದ್ದು ರಾಕ್ಷಸೀ ಕೃತ್ಯವಾಗಿದೆ. ಇದರಿಂದ ಇಡೀ ವಿಶ್ವವೇ ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಿನಿಂದ ಹೋರಾಡುವ ಸನ್ನಿವೇಶ ಎದುರಾಗಿದೆ. ಭಯೋತ್ಪಾದನೆ ಮತ್ತು ಧರ್ಮಾಂಧತೆಗೆ ಎಂದೂ ಮಾನವೀಯ ಸಂಬಂಧಗಳು ಮತ್ತು ಮೌಲ್ಯವಿರುವುದಿಲ್ಲ. ಧರ್ಮಾಂಧ ಮೂಲಭೂತವಾದಿಗಳ ವಿರುದ್ಧ ಮತ್ತು ಭಯೋತ್ಪಾದಕರ ವಿರುದ್ಧ ವಿಶ್ವ ಸಂಸ್ಥೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮೃತಪಟ್ಟ ಮಕ್ಕಳ ಆತ್ಮಕ್ಕೆ ಶಾಂತಿ ಕೋರಿ ತಾಲ್ಲೂಕು ಕಚೇರಿಯ ಮುಂದೆ ಒಂದು ನಿಮಿಷ ಮೌನಾಚರಣೆ ನಡೆಸಿದರು.
ಡಿ.ವೈ.ಎಫ್‌.ಐ ರಾಜ್ಯ ಮುಖಂಡ ಕುಂದಲಗುರ್ಕಿ ಮುನೀಂದ್ರ, ಎಸ್‌.ಎಫ್‌.ಐ ನ ನಾಗರಾಜು, ಮಂಜುನಾಥ, ವೆಂಕಟೇಶ್‌, ಸೌಮ್ಯ, ಮಂಜುಶ್ರೀ, ನೇತ್ರಾ, ಶೋಭಾ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!