20.4 C
Sidlaghatta
Wednesday, July 16, 2025

ವಿಧಾನಸಭೆಯ ಅಧಿವೇಶನದಲ್ಲಿ ನೀರಿನ ಬಗ್ಗೆ ದನಿ ಎತ್ತಲು ಮನವಿ

- Advertisement -
- Advertisement -

ಸರ್ಕಾರ ಶಾಶ್ವತ ನೀರಾವರಿ ಯೋಜನೆಗಳನ್ನು ಜಾರಿ ಮಾಡುವಲ್ಲಿ ಮಲತಾಯಿ ದೋರಣೆ ಮಾಡುತ್ತಿದೆ. ವಿದಾನಸಭೆಯ ಅಧಿವೇಶನದಲ್ಲಿ ನಮ್ಮ ಬಯಲುಸೀಮೆಯ ನೀರಿನ ಸಮಸ್ಯೆಯ ವಿಷಯವನ್ನು ಚರ್ಚಿಸಬೇಕೆಂದು ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಆಂಜನೇಯರೆಡ್ಡಿ ಶಾಸಕ ಎಂ.ರಾಜಣ್ಣ ಅವರನ್ನು ಕೋರಿದರು.
ಶಾಸಕ ಎಂ.ರಾಜಣ್ಣ ಅವರ ಮನೆಯ ಆವರಣದಲ್ಲಿ ಗುರುವಾರ ಶಾಸಕರಿಗೆ ಮನವಿ ಪತ್ರ ಸಲ್ಲಿಸಿ ಅವರು ಮಾತನಾಡಿದರು.
ಚುನಾವಣಾ ಸಮಯದಲ್ಲಿ ಸರ್ಕಾರ ಶಾಶ್ವತ ನೀರಾವರಿ ಯೋಜನೆ ಮಾಡುವುದಾಗಿ ಭರವಸೆ ನೀಡಿದ್ದು, ಇದುವರೆಗೆ ಶಾಶ್ವತ ನೀರಾವರಿ ಯೋಜನೆಯ ಬಗ್ಗೆ ಚಕಾರ ಎತ್ತದ ಸರ್ಕಾರದ ಬಗ್ಗೆ ಆಕ್ರೋಷ ವ್ಯಕ್ತಪಡಿಸಿದರು. ಉತ್ತರ ಭಾಗದ ಜಿಲ್ಲೆಗಳಿಗೆ ನೀರಾವರಿ ಯೋಜನೆಗಳಿಗೆ ಅತ್ಯಧಿಕ ಹಣ ಬಿಡುಗಡೆ ಮಾಡಿದ್ದು, ದಕ್ಷಿಣಭಾಗದ ಜಿಲ್ಲೆಗಳಲ್ಲಿ ನೀರಾವರಿ ಯೋಜನೆಗಳನ್ನು ಜಾರಿ ಮಾಡುವಲ್ಲಿ ಮಲತಾಯಿ ದೋರಣೆ ತೋರಿಸುತ್ತದೆ. ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಶ್ವತ ನೀರಾವರಿ ಯೋಜನೆಯಿಂದ ಸುಮಾರು ೩೦೦ ಕೆರೆಗಳಿಗೆ ನೀರು ತುಂಬಿಸುವುದಾಗಿ ಹೇಳಿದ ಸರ್ಕಾರ ಯಾವ ಯೋಜನೆಯಿಂದ ಎಷ್ಟು ನೀರು ಬರುತ್ತದೆ ಎಂದು ಅಂದಾಜು ಮಾಡದೆ, ಬಾಯಿ ಮಾತಿನಲ್ಲಿ ಮಾತ್ರ ಹೇಳುತ್ತಿದೆ. ರೈತರ ಬಾಯಿ ಮುಚ್ಚಿಸಲು ಬೆಂಗಳೂರಿನ ಕೊಳಚೆ ನೀರನ್ನು ಶುದ್ಧೀಕರಿಸಿ ಕೆರೆಗಳನ್ನು ತುಂಬಿಸುವ ಕೆ.ಸಿ ವ್ಯಾಲಿ ನೀರಾವರಿ ಯೋಜನೆಯನ್ನು ಜಾರಿ ಮಾಡುವುದಾಗಿ ಹೇಳಿದ್ದರು. ಈ ಯೋಜನೆ ಸಹ ನೆನೆಗುದಿಗೆ ಬಿದ್ದಿದ್ದು ಅದು ಸಹ ಜಾರಿಯಾಗಿಲ್ಲ ಎಂದು ಆಕ್ರೋಷ ವ್ಯಕ್ತಪಡಿಸಿದರು.
ಜೂನ್ ೫ ರಂದು ವಿಧಾನಸಭಾ ಅಧಿವೇಶನ ಪ್ರಾರಂಭವಾಗಲಿದ್ದು, ಬಯಲು ಸೀಮೆಯ ಬರಪೀಡಿತ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆಗಳ ಜಾರಿ ವಿಚಾರದಲ್ಲಿ ಸರ್ಕಾರದ ನಿಲುವು ಮತ್ತು ಸರ್ಕಾರದ ಮುಂದಿನ ಯೋಜನೆಗಳ ಕುರಿತು ವಿಶೇಷವಾದ ಚರ್ಚೆ ನಡೆಸಿ. ಸರ್ಕಾರದ ವತಿಯಿಂದ ನಿಖರವಾದ ಮಾಹಿತಿ ಪಡೆಯಿರಿ ಎಂದು ಶಾಸಕರಿಗೆ ಮನವಿ ಮಾಡಿದರು.
ಇನ್ನು ಕೆಲವೇ ತಿಂಗಳುಗಳಲ್ಲಿ ಅಧಿಕಾರಾವಧೀ ಮುಗಿದು ಮತ್ತೆ ಚುನಾವಣೆ ಬರುತ್ತಿದ್ದು, ಶಾಶ್ವತ ನೀರಾವರಿ ಯೋಜನೆಯನ್ನು ಆಸ್ತ್ರವನ್ನಾಗಿ ಮಾಡಿಕೊಂಡು ರಾಜಕೀಯ ಪಕ್ಷಗಳು ಕಣಕಿಳಿಯುತ್ತಿದ್ದಾವೆ. ಅಷ್ಟರೊಳಗೆ ನೀರಾವರಿ ಯೋಜನೆಗಳನ್ನು ಜಾರಿ ಮಾಡುವುದಾಗಿ ಸರ್ಕಾರ ಹೇಳುತ್ತಿದ್ದು, ಅದು ಸಾಧ್ಯವೇ ಎಂದು ಪ್ರಶ್ನಿಸಿದ ಅವರು ವಿಧಾನಸಭಾ ಅಧಿವೇಶನದಲ್ಲಿ ಚರ್ಚೆಯ ವಿಷಯವಾಗಬೇಕೆಂದು ತಿಳಿಸಿದರು.
ಶಾಸಕ ರಾಜಣ್ಣ ಮಾತನಾಡಿ ನೀರು ಎಲ್ಲರಿಗೂ ಬೇಕಾಗಿದ್ದು, ಶಾಶ್ವತ ನೀರಾವರಿ ಹೋರಾಟ ಸುಮಾರು ವರ್ಷಗಳಿಂದ ನಡೆಯುತ್ತಿದ್ದು, ವಿಧಾನಸಭಾ ಅದಿವೇಶನದಲ್ಲಿ ಅತ್ಯಂತ ಹೆಚ್ಚಿನ ಚರ್ಚೆಗೆ ಗ್ರಾಸವಾಗಲಿದೆ. ಈ ವಿಷಯವಾಗಿ ತಾವೂ ಚರ್ಚೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಶಾಶ್ವತ ನೀರಾವರಿ ಹೋರಾಟ ಸಮಿತಿ ಜಿಲ್ಲಾ ಉಪಾಧ್ಯಕ್ಷ ಮಳ್ಳೂರು ಹರೀಶ್, ಆನೂರು ದೇವರಾಜು, ಹಿತ್ತಲಹಳ್ಳಿ ಸುರೇಶ್, ವೆಂಕಟಸ್ವಾಮಿ, ದೇವರಾಜು, ಶ್ರೀನಿವಾಸ್ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!