16.5 C
Sidlaghatta
Wednesday, January 7, 2026

ವಿರಾಟ್ ವೀರಬ್ರಹ್ಮೇಂದ್ರಸ್ವಾಮಿಯವರ ಆರಾಧನೆ

- Advertisement -
- Advertisement -

ನಗರದ ಒಂದನೇ ನಗರ್ತಪೇಟೆಯಲ್ಲಿರುವ ಕಾಳಿಕಾಂಬ ಕಮಠೇಶ್ವರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶ್ವಕರ್ಮ ಜನಾಂಗದವರಿಂದ ಶ್ರೀಮತ್ ವಿರಾಟ್ ವೀರಬ್ರಹ್ಮೇಂದ್ರಸ್ವಾಮಿಯವರ ಆರಾಧನೆ, ಸಾಮೂಹಿಕ ಉಪನಯನಗಳು ಮತ್ತು ಅನ್ನದಾಸೋಹ ಭವನದ ಉದ್ಘಾಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಕಾಳಿಕಾಂಬ ಕಮಠೇಶ್ವರಸ್ವಾಮಿ ಸೇವಾ ಸಮಿತಿ , ತಾಲ್ಲೂಕು ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘ, ಕಾಳಿಕಾಂಬ ಮಹಿಳಾ ಮಂಡಳಿ ಸಂಯುಕ್ತವಾಗಿ ವೈಶಾಖ ಸುದ್ಧ ದಶಮಿಯಂದು ನಡೆಸಿದ ಕಾರ್ಯಕ್ರಮಗಳಲ್ಲಿ ಮೂಲ ವಿಗ್ರಹಗಳಿಗೆ ಅಭಿಷೇಕ, ಸಾಮೂಹಿಕ ಉಪನಯನಗಳು, ಶ್ರೀಮತ್ ವಿರಾಟ್ ವೀರಬ್ರಹ್ಮೇಂದ್ರಸ್ವಾಮಿ ಕಳಾಕರ್ಶನದ ಯಜ್ಞ, ಹೋಮ ಮತ್ತು ಕಳಶಸ್ಥಾಪನೆ, ವಿಶ್ವಕರ್ಮ ಯಜ್ಞ, ಮಹಾಮಂಗಳಾರತಿ, ತೀರ್ಥ ಪ್ರಸಾದವನ್ನು ವಿನಿಯೋಗಿಸಲಾಯಿತು.
ತಾಲ್ಲೂಕು ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮರನಾರಾಯಣಾಚಾರ್, ಕಾಳಿಕಾಂಬ ಕಮಠೇಶ್ವರಸ್ವಾಮಿ ಸೇವಾ ಸಮಿತಿ ಅಧ್ಯಕ್ಷ ಬಿ.ಕೆ.ಮುನಿರತ್ನಾಚಾರ್, ದಿಬ್ಬೂರಹಳ್ಳಿಯ ಈಶ್ವರಾಚಾರ್, ಕೆ.ಎನ್.ಜನಾರ್ಧನಮೂರ್ತಿ, ಶ್ರೀನಿವಾಸಾಚಾರಿ, ಸುಂದರಾಚಾರಿ, ಕೃಷ್ಣಾಚಾರ್, ಜಗದೀಶ್ ಕುಮಾರ್ ಮತ್ತಿತರರು ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!