ಅಭಿವೃದ್ದಿ ಕಾಮಗಾರಿಗಳನ್ನು ಮಾಡಲು ಟೆಂಡರ್ ಕರೆದು ವರ್ಷಾನುಗಟ್ಟಲೇ ವಿಳಂಬ ಮಾಡುವಂತಹ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ನಗರಸಭಾ ಸದಸ್ಯರುಗಳು ಒತ್ತಾಯಿಸಿದರು.
ನಗರದ ನಗರಸಭಾ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯರು ಕಾಮಗಾರಿ ವಿಳಂಬದ ಬಗ್ಗೆ ಅಸಮಧಾನ ವ್ಯಕ್ತಪಡಿಸಿದರು.
ನಗರಸಭೆಯಲ್ಲಿ ಕೆಲಸ ಮಾಡುತ್ತಿರುವ ಪರಿಸರ ಅಭಿಯಂತರ ದಿಲೀಪ್ ಅವರು ಸರಿಯಾಗಿ ಕರ್ತವ್ಯ ನಿರ್ವಹಿಸದೆ ಇರುವ ಕಾರಣದಿಂದಾಗಿ ಅವರಿಂದ ತುಂಬಾ ಸಮಸ್ಯೆಗಳಾಗುತ್ತಿದ್ದು, ಅವರನ್ನು ಕೂಡಲೇ ಬೇರೆ ಕಡೆಗೆ ವರ್ಗಾವಣೆ ಮಾಡುವಂತೆ ಸದಸ್ಯರು ಒತ್ತಾಯಿಸಿದರು, ಸದಸ್ಯರುಗಳಿಗೆ ಉತ್ತರಿಸಿದ ಮುಖ್ಯಾಧಿಕಾರಿ, ಈಗಾಗಲೇ ೯ ಬಾರಿಗೆ ಅಧಿಕಾರಿಗೆ ನೋಟಿಸ್ ಜಾರಿ ಮಾಡಲಾಗಿದೆ, ಒಂದು ನೋಟಿಸ್ಗೂ ಉತ್ತರ ನೀಡಿಲ್ಲ, ಈ ಬಗ್ಗೆ ಜಿಲ್ಲಾಧಿಕಾರಿಗಳಿಗೂ ದೂರು ನೀಡಿ, ಬೇರೆ ಕಡೆಗೆ ವರ್ಗಾವಣೆ ಮಾಡುವಂತೆ ವರದಿ ಸಲ್ಲಿಸಲಾಗಿದೆ ಎಂದರು.
ನಗರದ ಹೊರವಲಯದಲ್ಲಿರುವ ಅಮ್ಮನಕೆರೆಯ ಏರಿಯ ಮೇಲೆ ಅಳವಡಿಸಲಾಗಿದ್ದ ಹೈಮಾಸ್ಕ್ ವಿದ್ಯುತ್ ದೀಪಗಳನ್ನು ತೆರವುಗೊಳಿಸಲಾಗಿದ್ದು, ವಿದ್ಯುತ್ ದೀಪಗಳು ಏನಾಗಿವೆ ಎಂಬುದರ ಬಗ್ಗೆ ಮಾಹಿತಿಯಿಲ್ಲವೆಂದು ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು,
ಗುತ್ತಿಗೆ ಆಧಾರದಲ್ಲಿ ನಗರಸಭೆಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಪರವಾಗಿ ಕೆಲಸ ಮಾಡುತ್ತಿರುವ ಸಿಬ್ಬಂದಿಯನ್ನು ಕೂಡಲೇ ನಿಲ್ಲಿಸಿ. ಯಾವ ಸಿಬ್ಬಂದಿಯ ಹೆಸರಿನಲ್ಲಿ ಬಿಲ್ಗಳನ್ನು ಗುತ್ತಿಗೆದಾರರಿಗೆ ನೀಡುತ್ತಿದ್ದೀರೊ ಅವರನ್ನೆ ಕೆಲಸಕ್ಕೆ ನೇಮಕ ಮಾಡಿ, ಯಾವ ಕೆಲಸಕ್ಕಾಗಿ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳುತ್ತೀರೊ ಅದೇ ಕೆಲಸಗಳನ್ನು ಮಾಡಿಸಿ. ಜಲಗಾರರ ಕೈಯಲ್ಲಿ ವಿದ್ಯುತ್್ ಕೆಲಸಗಳನ್ನು ಮಾಡಿಸಲಾಗುತ್ತಿದೆ ಎಂದು ಸದಸ್ಯ ವೆಂಕಟಸ್ವಾಮಿ ತಿಳಿಸಿದರು.
ನಗರಸಭಾಧ್ಯಕ್ಷೆ ಮುಷ್ಟರಿತನ್ವೀರ್, ಉಪಾಧ್ಯಕ್ಷೆ ಸುಮಿತ್ರಮ್ಮರಮೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಕೇಶವಮೂರ್ತಿ, ಮುಖ್ಯಾಧಿಕಾರಿ ರಾಮ್ಪ್ರಕಾಶ್, ಸದಸ್ಯರಾದ ಚಿಕ್ಕಮುನಿಯಪ್ಪ, ಜೆ.ಎಂ.ಬಾಲಕೃಷ್ಣ, ಅಪ್ಸರ್ಪಾಷಾ, ಪ್ರಭಾವತಿ ಸುರೇಶ್, ಸುಹೇಲ್ಅಹ್ಮದ್ ಮುಂತಾದವರು ಸಭೆಯಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -