ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ನೌಕರರ ಪ್ರತಿಭಟನೆ

- Advertisement -
- Advertisement -

ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಂದೆ ಅಂಗನವಾಡಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗುರುವಾರ ಪ್ರತಿಭಟನೆ ನಡೆಸಿ ಸಿ.ಐ.ಟಿ.ಯು ಜಿಲ್ಲಾಧ್ಯಕ್ಷೆ ಲಕ್ಷ್ಮೀದೇವಮ್ಮ ಮಾತನಾಡಿದರು.
ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ನಡೆಸುವ ಮಾತೃಪೂರ್ಣ ಯೋಜನೆಗೆ ಇದುವರೆಗೂ ಮೂಲಭೂತ ಸೌಕರ್ಯ ಕಲ್ಪಿಸಿಲ್ಲ. ಇಡೀ ಜಿಲ್ಲೆಯಲ್ಲಿ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಡಬಲ್ ಸಿಲಿಂಡರ್ ಕೊಟ್ಟಿದ್ದಾರೆ, ಆದರೆ ಶಿಡ್ಲಘಟ್ಟ ತಾಲ್ಲೂಕಿನ ೩೩೯ ಕೇಂದ್ರಗಳಲ್ಲಿ ೯೮ ಕೇಂದ್ರಕ್ಕೆ ಮಾತ್ರ ನೀಡಿದ್ದಾರೆ ಎಂದು ಅವರು ಆರೋಪಿಸಿದರು.
ತಾಲ್ಲೂಕಿನಲ್ಲಿರುವ ೩೩೯ ಅಂಗನವಾಡಿ ಕೇಂದ್ರಗಳಲ್ಲಿ ಅರ್ಧಕ್ಕಿಂತ ಹೆಚ್ಚು ಕೇಂದ್ರಗಳು ಶಾಲೆ, ಬಾಡಿಗೆ ಕಟ್ಟಡ ಅಥವಾ ಸಮುದಾಯ ಭವನಗಳಲ್ಲಿ ನಡೆಯುತ್ತಿವೆ. ಇರುವ ಸ್ವಂತ ಕಟ್ಟಡಗಳನ್ನು ಸಕಾಲಕ್ಕೆ ದುರಸ್ತಿ ಮಾಡಿಸುತ್ತಿಲ್ಲ ಹಾಗೂ ಬಾಡಿಗೆ ಕಟ್ಟಡಗಳಿಗೆ ಸರಿಯಾಗಿ ಬಾಡಿಗೆ ಪಾವತಿಸುತ್ತಿಲ್ಲ. ಮೂರು ನಾಲ್ಕು ತಿಂಗಳುಗಳಾದರೂ ಗೌರವಧನ ಬಿಡುಗಡೆಯಾಗುತ್ತಿಲ್ಲ. ಪ್ರತಿ ತಿಂಗಳು ಐದನೇ ತಾರೀಖಿನೊಳಗೆ ವೇತನ ನೀಡಬೇಕು. ಖಾಲಿ ಇರುವ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಬೇಕು. ಮೂರು ತಿಂಗಳಿಗೊಮ್ಮೆ ಕುಂದುಕೊರತೆಗಳ ಸಭೆಯನ್ನು ಕಡ್ಡಾಯವಾಗಿ ಮಾಡಬೇಕು ಮುಂತಾದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಅಂಗನವಾಡಿ ನೌಕರರು ರಾಷ್ಟ್ರವ್ಯಾಪಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಈ ನಿಟ್ಟಿನಲ್ಲಿ ಅಂಗನವಾಡಿ ನೌಕರರ ಅಸ್ಥಿತ್ವ, ಮುಖ್ಯ ಸಮಸ್ಯೆಗಳು ಹಾಗೂ ಸ್ಥಳೀಯ ಸಮಸ್ಯೆಗಳನ್ನೊಳಗೊಂಡ ಮನವಿ ಪತ್ರವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಲಕ್ಷ್ಮೀದೇವಮ್ಮ ಅವರಿಗೆ ಅಂಗನವಾಡಿ ನೌಕರರ ಸಂಘದ ವತಿಯಿಂದ ನೀಡಲಾಯಿತು.
ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಲಕ್ಷ್ಮೀದೇವಮ್ಮ, ಅಶ್ವತ್ಥಮ್ಮ, ಗುಲ್ಜಾರ್, ಪಿಳ್ಳಮ್ಮ, ಮುನಿರತ್ನ, ನಾಗವೇಣಿ, ನಂಜಮ್ಮ, ಶಂಕರಪ್ಪ, ಪಾಪಣ್ಣ, ವೇಣುಗೋಪಾಲ್ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!