Home News ವಿಶೇಷ ಪೂಜೆ

ವಿಶೇಷ ಪೂಜೆ

0

ತಾಲೂಕಿನಾದ್ಯಂತ ಕಡೆಯ ಶ್ರಾವಣ ಶನಿವಾರವನ್ನು ಶ್ರದ್ದೆ, ಭಕ್ತಿ ಭಾವದಿಂದ ಆಚರಿಸಲಾಯಿತು.
ಪಟ್ಟಣದ ಕೋಟೆ ಆಂಜನೇಯಸ್ವಾಮಿ, ಕೆ ಎಚ್ ಬಿ ಕಾಲೋನಿಯ ಶನೇಶ್ವರ, ವಿನಾಯಕ ಗಾಯಿತ್ರಿ ದೇವಾಲಯ, ನಗರೇಶ್ವರ ಸ್ವಾಮಿ ದೇವಾಲಯ, ವಾಸವಿ ದೇವಾಲಯ ಸೇರಿದಂತೆ ಪುರಾಣ ಪ್ರಸಿದ್ಧ ತಲಕಾಯಲಬೆಟ್ಟದ ಭೂನೀಳಾ ಸಮೇತ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು.

ಕಡೆಯ ಶ್ರಾವಣ ಶನಿವಾರ ಅಂಗವಾಗಿ ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯದಲ್ಲಿ ದೇವರಿಗೆ ಬೆಣ್ಣೆ ಅಲಂಕಾರ ಮಾಡಲಾಗಿತ್ತು.
ಕಡೆಯ ಶ್ರಾವಣ ಶನಿವಾರ ಅಂಗವಾಗಿ ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯದಲ್ಲಿ ದೇವರಿಗೆ ಬೆಣ್ಣೆ ಅಲಂಕಾರ ಮಾಡಲಾಗಿತ್ತು.

ಹಾಗೆಯೆ ಚಿಕ್ಕದಾಸರಹಳ್ಳಿ ಗುಟ್ಟದ ಮೇಲಿನ ಶ್ರೀವೆಂಕಟರಮಣಸ್ವಾಮಿ, ರಾಮಲಿಂಗನ ಬೆಟ್ಟದ ರಾಮಲಿಂಗೇಶ್ವರ ದೇವಾಲಯ, ಬಶೆಟ್ಟಹಳ್ಳಿ ಸಮೀಪದ ಅನಂತಪದ್ಮನಾಭ ದೇವಾಲಯ, ಚೌಡಸಂದ್ರದ ಶ್ರೀ ಆಂಜನೇಯಸ್ವಾಮಿ, ವೀರಾಪುರದ ಶ್ರೀವರಸಿದ್ಧ್ದಿ ವಿನಾಯಕಸ್ವಾಮಿ, ಅಪ್ಪೇಗೌಡನಹಳ್ಳಿ ಗೇಟ್ ನ ಬಯಲಾಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಪುನಸ್ಕಾರಗಳು ನಡೆದವು.
ನಗರ ಸೇರಿದಂತೆ ತಾಲೂಕಿನ ಬಹುತೇಕ ಎಲ್ಲ ದೇವಾಲಯಗಳಲ್ಲೂ ವಿಶೇಷ ಹೂವಿನ ಅಲಂಕಾರ ವಿಶೇಷ ಪೂಜೆ ನೆರವೇರಿಸಿ ತೀರ್ಥ ಪ್ರಸಾದವನ್ನು ವಿನಿಯೋಗಿಸಲಾಯಿತು.