24.1 C
Sidlaghatta
Saturday, July 27, 2024

ವಿಶ್ವ ಜನಸಂಖ್ಯಾ ದಿನಾಚರಣೆಯ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ಜನಸಂಖ್ಯಾ ಜಾಗೃತಿ ಜಾಥಾ

- Advertisement -
- Advertisement -

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಶುಕ್ರವಾರ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ‘ಯೋಜಿತ ಪರಿವಾರ –ಸುಖ ಸಂತೋಷ ಅಪಾರ’ ಎಂಬ ಘೋಷಣೆಯೊಂದಿಗೆ ಆಚರಿಸಲಾಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶಾಲಾ ವಿದ್ಯಾರ್ಥಿಗಳು ಜನಸಂಖ್ಯಾ ಜಾಗೃತಿ ಜಾಥಾ ನಡೆಸಿದರು.
‘ಜನಸಂಖ್ಯೆಯ ಹೆಚ್ಚಳದಿಂದ ಸರ್ಕಾರ ರೂಪಿಸುವ ವಿವಿಧ ಯೋಜನೆಗಳು ಎಲ್ಲರನ್ನೂ ತಲುಪಲಾಗುತ್ತಿಲ್ಲ. ಭೂಮಿಯು ಇರುವಷ್ಟೇ ಇರುತ್ತದೆ. ವಿಸ್ತರಿಸಲಾಗದು. ಆದರೆ ಹೆಚ್ಚುವ ಜನಸಂಖ್ಯೆಯ ಭಾರ ಹಾಗೂ ಒತ್ತಡ ಭೂಮಿಯ ಮೇಲೆ ಬೀಳುವುದರಿಂದ ಆಹಾರದ ಕೊರತೆ ಉಂಟಾಗುತ್ತದೆ. ವೈದ್ಯಕೀಯ ತಂತ್ರಜ್ಞಾನ ಸಾಕಷ್ಟು ಅಭಿವೃದ್ಧಿ ಆಗಿರುವುದರಿಂದ ಮಕ್ಕಳಾಗದಂತೆ ಶಸ್ತ್ರಚಿಕಿತ್ಸೆಯನ್ನು ಸುಲಭವಾಗಿ ಮಾಡಿಸಿಕೊಳ್ಳಬಹುದಾಗಿದೆ. ಕೆಲವು ಮಹಿಳೆಯರು ಮನೆಯಲ್ಲೂ ಹಾಗೂ ಹೊರಗೂ ದುಡಿಯುವುದಿದ್ದಲ್ಲಿ ಪುರುಷರು ಶಸ್ತ್ರಚಿಕಿತ್ಸೆಗೆ ಒಳಗಾಗಬಹುದು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅನಿಲ್‌ಕುಮಾರ್‌ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.
‘ಅಂತರ್ಜಲ ಕುಸಿದು, ಕೊಳವೆ ಬಾವಿಗಳನ್ನು ಕೊರೆಸಿ ಕೊರೆಸಿ ರೈತರು ಹಾಳಾಗಿದ್ದಾರೆ. ಭೂಮಿಯಲ್ಲಿ ಬೆಳೆ ತೆಗೆಯುವುದೇ ಕಷ್ಟಕರ ಪರಿಸ್ಥಿತಿಯಲ್ಲಿ ಹೆಚ್ಚುವ ಜನಸಂಖ್ಯೆಗೆ ಆಹಾರ ಒದಗಿಸುವುದು ಕಷ್ಟಕರ. ಈ ಬಗ್ಗೆ ಜನರೇ ಜಾಗೃತರಾಗಬೇಕು. ಪ್ರತಿಯೊಬ್ಬರೂ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಎಸ್‌.ಎಂ.ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.
ತಹಶೀಲ್ದಾರ್‌ ಜಿ.ಎ.ನಾರಾಯಣಸ್ವಾಮಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಜಿ.ನರಸಿಂಹಮೂರ್ತಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಶಿವಲೀಲಾ ರಾಜಣ್ಣ, ಪಿ.ಎಲ್‌.ಡಿ. ಬ್ಯಾಂಕ್‌ ಅಧ್ಯಕ್ಷ ಎ.ರಾಮಚಂದ್ರಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್‌.ಕೆ.ಗುರುರಾಜರಾವ್‌, ಆರೋಗ್ಯ ಶಿಕ್ಷಣಾಧಿಕಾರಿ ಕಿರಣ್‌ ಕುಮಾರ್‌ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!