ಪತಂಜಲಿ ಯೋಗ ಶಿಕ್ಷಣ ಸಮಿತಿಯ ಶಿಡ್ಲಘಟ್ಟ ಶಾಖೆಯ ವತಿಯಿಂದ ಜೂನ್ 21ರ ಮಂಗಳವಾರದಂದು 2ನೇ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.
ನಗರದ ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ತಾಲ್ಲೂಕಿನ ಯೋಗ ಬಂಧು ಭಗಿನಿಯರು ಹಾಗೂ ಸಾರ್ವಜನಿಕರೊಂದಿಗೆ ಈ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ನಗರದ ಪ್ರಮುಖ ರಸ್ತೆಗಳಲ್ಲಿ ಶೋಭಾಯಾತ್ರೆ, ಯೋಗಾಸನ ಪ್ರದರ್ಶನ ಮತ್ತು ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಶೋಭಾಯಾತ್ರೆಯ ಉದ್ಘಾಟನೆಯನ್ನು ಬೆಳಿಗ್ಗೆ 6.30 ಗಂಟೆಗೆ ನಗರದ ರೈಲ್ವೆ ನಿಲ್ದಾಣದ ಬಳಿ ಸರ್ಕಲ್ ಇನ್ಸ್ಪೆಕ್ಟರ್ ಟಿ.ಸಿ.ವೆಂಕಟೇಶ್, ಸಬ್ಇನ್ಸ್ಪೆಕ್ಟರ್ ವಿಜಯರೆಡ್ಡಿ ಮಾಡುವರು.
ಸಮಾರೋಪ ಸಮಾರಂಭವನ್ನು ನಗರೇಶ್ವರ ಕಲ್ಯಾಣಮಂಟಪದಲ್ಲಿ ಬೆಳಿಗ್ಗೆ 9.30 ಗಂಟೆಗೆ ಆಯೋಜಿಸಿದ್ದು, ಅಧ್ಯಕ್ಷತೆಯನ್ನು ಶಾಸಕ ಎಂ.ರಾಜಣ್ಣ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಆಯುಶ್ ಇಲಾಖೆಯ ವೈದ್ಯಾಧಿಕಾರಿ ಕೆ.ವಿಜಯಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಪತಂಜಲಿ ಯೋಗ ಶಿಕ್ಷಣ ಸಮಿತಿ ಯೋಜನಾ ಪ್ರಮುಖ್ ಯು.ವೈ.ಮಂಜುನಾಥ್, ಸಂಚಾಲಕ ಎಸ್.ಶಂಕರ್ ವಹಿಸಲಿದ್ದಾರೆ.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







