20.3 C
Sidlaghatta
Friday, August 1, 2025

ವೀರಬ್ರಹ್ಮೇಂದ್ರಸ್ವಾಮಿಯವರ ಆರಾಧನೆ

- Advertisement -
- Advertisement -

ನಗರದ ಒಂದನೇ ನಗರ್ತಪೇಟೆಯ ಕಾಳಿಕಾಂಬ ಕಮಠೇಶ್ವರ ದೇವಾಲಯದಲ್ಲಿ ಮಂಗಳವಾರ ತಾಲ್ಲೂಕು ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘ, ಕಾಳಿಕಾಂಬ ಮಹಿಳಾ ಮಂಡಲಿ, ಕಾಳಿಕಾಂಬ ಕಮಠೇಶ್ವರ ಯುವಕ ಮಂಡಲಿ ವತಿಯಿಂದ ಪೋತಲೂರು ವೀರಬ್ರಹ್ಮೇಂದ್ರಸ್ವಾಮಿಯವರ ಆರಾಧನೆ ಮತ್ತು ಸಾಮೂಹಿಕ ಉಪನಯನಗಳನ್ನು ನಡೆಸಲಾಯಿತು.
ಮೂಲ ವಿಗ್ರಹಳಿಗೆ ಅಭಿಷೇಕ, ಸಾಮೂಹಿಕ ಉಪನಯನಗಳು, ವಿರಾಟ್ ವೀರಬ್ರಹ್ಮೇಂದ್ರಸ್ವಾಮಿ ಕಳಾಕರ್ಶನದ ಯಜ್ಞ, ಹೋಮ, ವಿಶ್ವಕರ್ಮ ಯಜ್ಞ, ಮಹಾಮಂಗಳಾರತಿ ಮತ್ತು ತೀರ್ಥಪ್ರಸಾದಗಳ ವಿನಿಯೋಗ ನಡೆಯಿತು.
‘ಚಿನ್ನ, ಬೆಳ್ಳಿ, ಮರಗೆಲಸ, ಕಮ್ಮಾರಿಕೆ, ಶಿಲ್ಪಕಲೆ ಮತ್ತಿತರ ಕುಶಲಕರ್ಮಿ ಸಮುದಾಯಗಳ ಅಭಿವೃದ್ಧಿಗಾಗಿ ರಾಜ್ಯ ಸರಕಾರ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದು, ಅದರಿಂದ ಸಿಗುವ ಸೌಲಭ್ಯಗಳನ್ನು ಬಡ ಜನರಿಗೆ ತಲುಪಿಸುವ ಕೆಲಸ ಆಗಬೇಕಿದೆ’ ಎಂದು ನಿವೃತ್ತ ಕಾರ್ಯನಿರ್ವಾಹಣಾಧಿಕಾರಿ ವೀರಬ್ರಹ್ಮಾಚಾರಿ ಈ ಸಂದರ್ಭದಲ್ಲಿ ತಿಳಿಸಿದರು.
ತಾಲ್ಲೂಕು ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮರನಾರಾಯಣಾಚಾರ್ಯ, ದಿಬ್ಬೂರಹಳ್ಳಿ ಈಶ್ವರಾಚಾರ್ಯ, ಗೌರವಾಧ್ಯಕ್ಷ ಕೆ.ಎನ್.ಜನಾರ್ಧನಮೂರ್ತಿ, ಕಾಳಿಕಾಂಬ ಕಮಠೇಶ್ವರ ಸೇವಾ ಸಮಿತಿ ಅಧ್ಯಕ್ಷ ಬಿ.ಕೆ.ಮುನಿರತ್ನಾಚಾರ್ಯ, ಉಪಾಧ್ಯಕ್ಷ ಸುಂದರಾಚಾರ್ಯ, ಕೃಷ್ಣಾಚಾರ್ಯ, ಆರ್.ಜಗದೀಶ್ಕುಮಾರ್, ಸುಬ್ರಹ್ಮಣ್ಯಾಚಾರ್ಯ, ಟಿ.ವಿ.ಬ್ರಹ್ಮಾಚಾರ್ಯ, ಶ್ರೀನಿವಾಸಾಚಾರ್ಯ, ಕಲಾವತಮ್ಮ, ಚಂದ್ರಾಚಾರ್ಯ, ಗೋವಿಂದಮ್ಮ, ಷರತ್ಬಾಬು, ಪ್ರಧಾನ ಅರ್ಚಕ ಎ.ಜಿ.ಮುನೀಶ್ವರಾಚಾರ್ಯ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!