ಶ್ರೀರಾಮನವಮಿ ನಂತರದ ದಿನಗಳಲ್ಲಿ ಆಚರಿಸುವ ವಿಶೇಷ ಪೂಜೆ ಅಂಗವಾಗಿ ಸೋಮವಾರ ವೀರಾಪುರದಲ್ಲಿ ಶ್ರೀವರಸಿದ್ದಿ ವಿನಾಯಕ ಸ್ವಾಮಿ ದೇವಾಲಯದಲ್ಲಿ ಪೂಜೆ ಹಮ್ಮಿಕೊಳ್ಳಲಾಗಿತ್ತಲ್ಲದೆ ಸಾಮೂಹಿಕ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.
ತಾಲ್ಲೂಕಿನ ವೀರಾಪುರ ಗ್ರಾಮದಲ್ಲಿ ನೆಲೆಸಿರುವ ವರಸಿದ್ದಿ ವಿನಾಯಕಸ್ವಾಮಿ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ದೇವರಿಗೆ ವಿಶೇಷ ವೀಳ್ಯದ ಎಲೆ ಹಾಗೂ ಒಂಭತ್ತು ವಿಧದ ಹೂವುಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು.
ಬೆಳಗ್ಗೆ ಸೂರ್ಯೋದಯಕ್ಕೂ ಮುನ್ನವೇ ಪೂಜೆ ಆರಂಭಿಸಿ ಪಂಚಾಮೃತಾಭಿಷೇಕ ಸೇರಿದಂತೆ ನಾನಾ ವಿಧವಾದ ಪೂಜೆಗಳನ್ನು ನೆರವೇರಿಸಿ ಮಹಾ ಮಂಗಳಾರತಿ ನೀಡಿ ತೀರ್ಥ ಪ್ರಸಾದವನ್ನು ವಿನಿಯೋಗಿಸಲಾಯಿತು.
ಜತೆಗೆ ಗ್ರಾಮಸ್ಥರು ದಾನಿಗಳಿಂದ ಸಂಗ್ರಹಿಸಿದ ದವಸ ದಾನ್ಯ, ತರಕಾರಿಗಳಿಂದಲೆ ತಯಾರು ಮಾಡಿದ ಮುದ್ದೆ, ಸಾಂಬಾರು, ಅನ್ನ, ರಸ ಮುಂತಾದ ಖಾದ್ಯಗಳಿಂದ ಸುತ್ತ ಮುತ್ತಲ ಗ್ರಾಮಸ್ಥರು ಹಾಗೂ ಭಕ್ತರಿಗೆ ಸಾಮೂಹಿಕ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







