Home News ವೇತನ ನೀಡುವಂತೆ ಪೌರಕಾರ್ಮಿಕರ ಪ್ರತಿಭಟನೆ

ವೇತನ ನೀಡುವಂತೆ ಪೌರಕಾರ್ಮಿಕರ ಪ್ರತಿಭಟನೆ

0

ಕಳೆದ ಹದಿನಾಲ್ಕು ತಿಂಗಳುಗಳಿಂದ ನಮಗೆ ವೇತನ ನೀಡಿಲ್ಲ. ನಮಗೆ ವೇತನವನ್ನು ನೀಡಿ ಎಂದು ಪೌರಕಾರ್ಮಿಕರು ನಗರಸಭೆಯ ಮುಂದೆ ಸೋಮವಾರ ಪ್ರತಿಭಟಿಸಿದರು.
ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ ಡೌನ್ ಆಗಿದ್ದು, ಎಲ್ಲರೂ ಸುರಕ್ಷಿತವಾಗಿ ಮನೆಯೊಳಗಿದ್ದರೆ, ಪೌರಕಾರ್ಮಿಕರಾದ ನಾವು ನಮ್ಮ ಪ್ರಾಣವನ್ನು ಪಣಕ್ಕಿಟ್ಟು, ನಿರಂತರವಾಗಿ ನಗರವನ್ನು ಸ್ವಚ್ಛಗೊಳಿಸುತ್ತಿದ್ದೇವೆ. ಹೊರಗುತ್ತಿಗೆ ಪೌರಕಾರ್ಮಿಕರಾದ 19 ಜನರಿಗೆ ನಗರಸಭೆಯಿಂದ 14 ತಿಂಗಳಿನಿಂದ ವೇತನ ನೀಡಿಲ್ಲ. ಉಳಿದವರಿಗೆ ಆರು ತಿಂಗಳಿನಿಂದ ವೇತನ ನೀಡಿಲ್ಲ. ನಾವುಗಳು ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದೇವೆ. ನಮ್ಮ ಕುಟುಂಬಗಳನ್ನು ಪೋಷಿಸಲು ಕಷ್ಟಪಡುತ್ತಿದ್ದೇವೆ. ಮಕ್ಕಳ ವಿದ್ಯಾಭ್ಯಾಸಕ್ಕೆ ನಮ್ಮ ಬಳಿ ಹಣವಿಲ್ಲ. ಇದರಿಂದಾಗಿ ನಾವು ಮಾನಸಿಕವಾಗಿ ನೊಂದು ದಿಕ್ಕು ತೋಚದಂತಾಗಿದೆ. ನಮ್ಮ ಸಮಸ್ಯೆಗಳನ್ನು ಹೇಳಿ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ನಮ್ಮ ವೇತನವನ್ನು ಕೊಡಿ ಎಂದು ಒತ್ತಾಯಿಸಿದರು.
“ಪೌರಕಾರ್ಮಿಕರು ನಮ್ಮ ನಗರದ ನರನಾಡಿಗಳಿದ್ದಂತೆ. ಅವರಿಗೆ ಬುಧವಾರದೊಳಗೆ ಮೂರು ತಿಂಗಳ ವೇತನ ನೀಡುತ್ತೇವೆ. ಮುಂದಿನ ತಿಂಗಳಿನಲ್ಲಿ ಉಳಿದ ವೇತನವನ್ನು ಹೊಂದಿಸಿ ಕೊಡಲು ವ್ಯವಸ್ಥೆ ಮಾಡುತ್ತೇವೆ” ಎಂದು ಪೌರಾಯುಕ್ತ ತ್ಯಾಗರಾಜ್ ಭರವಸೆ ನೀಡಿದ ನಂತರ ಪ್ರತಿಭಟನಾಕಾರರ ಹಿಂದಿರುಗಿದರು.

error: Content is protected !!