19.6 C
Sidlaghatta
Saturday, February 28, 2026

ವೈಕುಂಠ ದ್ವಾದಶಿ

- Advertisement -
- Advertisement -

ವೈಕುಂಠ ದ್ವಾದಶಿಯ ಪ್ರಯುಕ್ತ ಮಂಗಳವಾರದಂದು ನಗರದ ಪುರಾಣ ಪ್ರಸಿದ್ಧ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ವೈಕುಂಠದ ಬಾಗಿಲು ತೆಗೆಯಲಾಗಿತ್ತು. ವಿಶೇಷ ಪೂಜೆಯನ್ನು ವಾಸವಿ ಮಂಡಳಿ ಮತ್ತು ವಾಸವಿ ಯುವಜನ ಸಂಘದಿಂದ ಆಯೋಜಿಸಲಾಗಿತ್ತು.
ವಾಸವಿ ರಸ್ತೆಯಲ್ಲಿ ಸಾಲುಗಟ್ಟಿದ್ದ ಜನರು ದೇವರ ದರ್ಶನ ಪಡೆದು ಪ್ರಸಾದವನ್ನು ಸ್ವೀಕರಿಸಿದರು. ದೇವರಿಗೆ ವಿಶೇಷ ಅಲಂಕಾರವನ್ನು ಮಾಡಲಾಗಿದ್ದು, ವೆಂಕಟರಮಣಸ್ವಾಮಿಯ ಉತ್ಸವ ಮೂರ್ತಿಯನ್ನು ಉಯ್ಯಾಲೆಯಲ್ಲಿರಿಸಿದ್ದು, ಭಕ್ತರು ದೇವರ ಅಡಿಯಲ್ಲಿ ಹಾದು ಬರಲು ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.
ತಂಡೋಪತಂಡವಾಗಿ ಆಗಮಿಸಿದ ಭಕ್ತಾಧಿಗಳು ರಾತ್ರಿವರೆಗೂ ವೈಕುಂಠದ ಬಾಗಿಲ ಮೂಲಕ ದೇವರ ದರ್ಶನ ಪಡೆದರು.
ವಾಸವಿ ಯುವಜನ ಸಂಘದ ಅಧ್ಯಕ್ಷ ಕೇದಾರಿನಾಥ್, ವಾಸವಿ ಮಂಡಳಿಯ ಅಧ್ಯಕ್ಷ ಎಲ್.ವಿ.ವಿ.ಗುಪ್ತ, ನಾಗೇಶ್, ಸಂತೋಷ್, ರಾಜೇಶ್, ಸಂದೀಪ್, ವಿಘ್ನೇಶ್, ಕೆ.ಎಲ್.ವಿ.ಪ್ರಸಾದ್, ಭದ್ರಿನಾಥ್, ಸುರೇಶ್, ಸತ್ಯನಾರಾಯಣಶೆಟ್ಟಿ ಮತ್ತಿತರರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!