ನಗರದ ಕೆ.ಎಚ್.ಬಿ ಕಾಲೋನಿಯ ಗಾಯತ್ರಿನಗರದಲ್ಲಿನ ಮಹಾಗಣಪತಿ, ಗಾಯತ್ರಿದೇವಿ ಮತ್ತು ಶನೇಶ್ವರಸ್ವಾಮಿ ದೇವಾಲಯದಲ್ಲಿ ಮಂಗಳವಾರ ಮಹಾಲಕ್ಷ್ಮಿಯಾಗ ಹಾಗೂ ೨೧ನೇ ವರ್ಷದ ಶನೇಶ್ವರ ಜಯಂತಿ, 108 ಲೀಟರ್ ಕ್ಷೀರಾಭಿಷೇಕ ಹಾಗೂ ಬ್ರಹ್ಮರಥೋತ್ಸವವನ್ನು ಆಯೋಜಿಸಲಾಗಿತ್ತು.
ಶನೇಶ್ವರ ಜಯಂತಿ ಪ್ರಯುಕ್ತ ಸಾಮೂಹಿಕ ಎಳ್ಳು ದೀಪೋತ್ಸವ, ಶನೇಶ್ವರಸ್ವಾಮಿಯ ಹೋಮ, ತೈಲಾಭಿಷೇಕ, 108 ಲೀಟರ್ ಹಾಲು ಮತ್ತು 108 ಲೀಟರ್ ಮೊಸರು ಅಭಿಷೇಕ, ಪಂಚಾಮೃತಾಭಿಷೇಕ, ಶಾಲ್ಯಾನ್ನ ಅಭಿಷೇಕ, ವಿಶೇಷ ಹೂವಿನ ಅಲಂಕಾರ ಮಾಡಲಾಯಿತು.
ನಾಲ್ಕು ದಿನಗಳ ಕಾಲ ನಡೆಯುವ ವಿವಿಧ ಪೂಜಾ ಕಾರ್ಯಕ್ರಮಗಳು ಸೋಮವಾರ ಪ್ರಾರಂಭಗೊಂಡಿದ್ದು, ಗುರುವಾರದ ತನಕ ಸಾಗಲಿದೆ. ಈ ಪೂಜಾ ಕಾರ್ಯಗಳ ನಡುವೆ ಮಂಗಳವಾರ ಕೆ.ಎಚ್.ಬಿ. ಕಾಲೋನಿಯ ಮುಖ್ಯರಸ್ತೆಗಳಲ್ಲಿ ಬ್ರಹ್ಮರಥೋತ್ಸವದ ಮೆರವಣಿಗೆಯನ್ನು ಮಾಡಲಾಯಿತು. ನೂರಾರು ಭಕ್ತರು ನೆರೆದಿದ್ದರು. ಅನ್ನಸಂತರ್ಪಣೆಯನ್ನು ಆಯೋಜಿಸಲಾಗಿತ್ತು.
ಪ್ರಧಾನ ಅರ್ಚಕ ವಿ.ಎನ್.ರಾಮಮೋಹನ್ ಶಾಸ್ತ್ರಿ, ನಗರಸಭಾ ಸದಸ್ಯರಾದ ನಾರಾಯಣಸ್ವಾಮಿ, ಸುಗುಣ ಲಕ್ಷ್ಮಿನಾರಾಯಣ್, ನಗರ್ತಮಂಡಳಿಯ ಶಿವಶಂಕರ್, ವಸಂತಕುಮಾರ್, ತೀರ್ಥಂಕರ, ಡಾ.ಸತ್ಯನಾರಾಯಣ್ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







