26.5 C
Sidlaghatta
Monday, February 23, 2026

ಶನೈಶ್ಚರ ಜಯಂತಿ

- Advertisement -
- Advertisement -

ನಗರದ ಗಾಯತ್ರಿನಗರದ ಕೆ.ಎಚ್.ಬಿ.ಕಾಲೋನಿಯ ಮಹಾಗಣಪತಿ, ಗಾಯತ್ರಿದೇವಿ ಮತ್ತು ಶನೈಶ್ಚರಸ್ವಾಮಿ ದೇವಾಲಯದಲ್ಲಿ ಸೋಮವಾರ 18ನೇ ವರ್ಷದ ಶನೈಶ್ಚರ ಜಯಂತಿ, 108 ಲೀಟರ್ ಕ್ಷೀರಾಭಿಷೇಕ ಮತ್ತು ಕಲ್ಯಾಣ ಬ್ರಹ್ಮರಥೋತ್ಸವವನ್ನು ಆಯೋಜಿಸಲಾಗಿತ್ತು.
ಭಾನುವಾರದಿಂದ ಪ್ರಾರಂಭಗೊಂಡ ಪೂಜಾ ಮಹೋತ್ಸವವು ಎರಡು ದಿನಗಳ ಕಾಲ ನಡೆಯಿತು. ಸಾಮೂಹಿಕ ಎಳ್ಳು ದೀಪೋತ್ಸವ, ತೈಲಾಭಿಷೇಕ, 108 ಲೀಟರ್ ಕ್ಷೀರಾಭಿಷೇಕ,ಅಂಕುರಾರ್ಪಣೆ, ಧ್ವಜಾರೋಹಣ, ಬಲಿಹರಣ, ಶನೈಶ್ಚರಸ್ವಾಮಿಯ ತಿಲಹೋಮ, ಶಾಲ್ಯನ್ನ ಅಭಿಷೇಕ, ಮಹಾಸ್ನಪನೆ, ಕಲ್ಯಾಣೋತ್ಸವ ಮತ್ತು ಬ್ರಹ್ಮರಥೋತ್ಸವವನ್ನು, ಉಯ್ಯಾಲೋತ್ಸವ, ಶಯನೋತ್ಸವ ನಡೆಸಲಾಯಿತು. ತೀರ್ಥ ಪ್ರಸಾದವನ್ನು ವಿನಿಯೋಗಿಸಲಾಯಿತು.
ಗಾಯತ್ರಿ ದೇವಿ ಸೇವಾ ಮತ್ತು ಅಭಿವೃದ್ಧಿ ಟ್ರಸ್ಟ್ ಸದಸ್ಯರು, ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ್ದ ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!