29.1 C
Sidlaghatta
Saturday, March 25, 2023

ಶಾಶ್ವತ ನೀರಾವರಿ, ಕೈಗಾರಿಕೆಗಳ ಸ್ಥಾಪನೆ, ಮೂಲಸೌಕರ್ಯ ಕಲ್ಪಿಸುವುದು ನಮ್ಮ ಆದ್ಯತೆ – ಎಚ್‌.ಸುರೇಶ್‌

- Advertisement -
- Advertisement -

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಮೂಲಭೂತ ಸೌಲಭ್ಯ, ಹಳ್ಳಿಗಳಲ್ಲಿ ರಸ್ತೆ, ಕುಡಿಯುವ ನೀರು, ಭ್ರಷ್ಟಾಚಾರ ರಹಿತ ಆಡಳಿತ, ಶಾಶ್ವತ ನೀರಿಗಾಗಿ ಪರಿಶ್ರಮ ಇವು ನಮ್ಮ ಯೋಜನೆಗಳು. ತಾಲ್ಲೂಕಿನಾದ್ಯಂತ ಹಲವಾರು ಸ್ಥಳೀಯ ಸಮಸ್ಯೆಗಳಿವೆ. ಇದುವರೆಗೂ ಆಡಳಿತವನ್ನು ನಡೆಸಿದವರ ಬಗ್ಗೆ ಜನರಲ್ಲಿ ನಿರಾಸೆಯಿದೆ. ಬಿಜೆಪಿ ಜನರಿಗೆ ಆಶಾಕಿರಣವಾಗಿದೆ. ಜನರ ಆಸೆಯನ್ನು ಹುಸಿ ಮಾಡುವುದಿಲ್ಲ. ಬೇರೆ ಪಕ್ಷಗಳವರು ಹಣದ ಪ್ರಭಾವದಿಂದ ಚುನಾವಣಾ ಆಯೋಗದ ಕಣ್ತಪ್ಪಿಸಿ ಅಡ್ಡದಾರಿ ಹಿಡಿಯುತ್ತಿದ್ದಾರೆ. ನಾವೇನಿದ್ದರೂ ಅಭಿವೃದ್ಧಿಯ ಮಂತ್ರದೊಂದಿಗೆ ಮತಯಾಚಿಸುತ್ತೇವೆ ಎಂದು ಬಿಜೆಪಿ ಪಕ್ಷದ ಅಭ್ಯರ್ಥಿ ಎಚ್‌.ಸುರೇಶ್‌ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಕ್ಷೇತ್ರದಲ್ಲಿ ಜಿಜೆಪಿ ಪಕ್ಷವನ್ನು ಕಳೆದ ಹಲವು ವರ್ಷಗಳಿಂದ ಶ್ರಮಪಟ್ಟು ಬೆಳೆಸಿದ್ದು ಈ ಬಾರಿ ಪ್ರತಿಯೊಂದು ಬೂತ್‌ನಲ್ಲೂ ಸಕ್ರಿಯ ಬಿಜೆಪಿ ಕಾರ್ಯಕರ್ತರು ಏಜೆಂಟರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.
ಉತ್ತಮ ಆಜೆಂಡಾವನ್ನು ಇಟ್ಟುಕೊಂಡು ಚುನಾವಣೆಗೆ ಹೋಗುತ್ತಿದ್ದೇವೆ. ಕ್ಷೇತ್ರದಲ್ಲಿ ಉತ್ತಮ ಸಂಘಟನೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಯಡಿಯೂರಪ್ಪ, ನೇತೃತ್ವದ ಸರ್ಕಾರಗಳ ಯೋಜನೆಗಳು ನಮಗೆ ಶ್ರೀರಕ್ಷೆಯಾಗಲಿದೆ.
ಶಾಶ್ವತ ನೀರಾವರಿ ಯೋಜನೆ ತರಲಿಕ್ಕೆ ಪ್ರಾಮಾಣಿಕ ಪ್ರಯತ್ನ, ಕೈಗಾರಿಕೆಗಳ ಸ್ಥಾಪನೆ, ಹಳ್ಳಿಗಳಿಗೆ ಮೂಲಸೌಕರ್ಯ ಕಲ್ಪಿಸುವುದು ನಮ್ಮ ಆದ್ಯತೆಯಾಗಿದೆ. 20 ವರ್ಷಗಳಿಂದ ಕ್ಷೇತ್ರದಲ್ಲಿ ಇದ್ದೇನೆ.
ಸಮಸ್ಯೆಗಳನ್ನು ಪಟ್ಟಿ ಮಾಡಿದ್ದೇನೆ. ಸಂಘ, ಸಂಸ್ಥೆಗಳ ಹೋರಾಟಗಳಿಗೆ ಸಹಕಾರ ನೀಡಿದ್ದೇನೆ. ಎಲ್ಲರ 232 ಮತಗಟ್ಟೆಗಳಲ್ಲಿ ಏಜೆಂಟರನ್ನು ನೇಮಕ ಮಾಡಿದ್ದೇವೆ.
ಬಿಜೆಪಿ ತಾಲ್ಲೂಕು ಮಂಡಲ ಅಧ್ಯಕ್ಷ ಬಿ.ಸಿ.ನಂದೀಶ್ ಮಾತನಾಡಿ, ಸ್ಥಳೀಯರಾಗಿರುವ ಎಚ್‌. ಸುರೇಶ್ ಅವರು ಈ ಬಾರಿಯ ಚುನಾವಣೆಯಲ್ಲಿ ಜಯಗಳಿಸಲಿದ್ದಾರೆ. ತತ್ವ ಸಿದ್ಧಾಂತಗಳ ಆಧಾರದಲ್ಲಿರುವ ಬಿಜೆಪಿಯಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯವಾಗುತ್ತದೆ. ಬೂತ್ ಮಟ್ಟದಲ್ಲಿ ಪ್ರಚಾರ ಆರಂಭಿಸಿದ್ದೇವೆ. ಪ್ರಚಾರದ ವೇಳೆ, 60 ವರ್ಷ ಆಡಳಿತ ನಡೆಸಿರುವವರ ಬಗ್ಗೆ ಜನರು ನಿರಾಸೆಯಿಂದ ಇದ್ದಾರೆ. ಇದಕ್ಕೆ ಪರ್ಯಾಯವಾಗಿ ಬಿಜೆಪಿಯನ್ನು ಮೆಚ್ಚಿಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ವೈಖರಿ ನಮಗೆ ಉತ್ಸಾಹ ತಂದಿದೆ. ಕಾಂಗ್ರೆಸ್, ಜೆಡಿಎಸ್ ನಲ್ಲಿನ ಭಿನ್ನಮತ ಬಿಜೆಪಿಗೆ ಲಾಭವಾಗಲಿದೆ. ಎರಡೂ ಪಕ್ಷಗಳು ಕುಡಿಯುವ ನೀರಿಗೆ, ಕೃಷಿಗೆ ಆಧ್ಯತೆ ನೀಡಿಲ್ಲ, ಬಿಜೆಪಿಗೆ ಅಧಿಕಾರ ನೀಡಿದರೆ, ಶಾಶ್ವಾತ ಪರಿಹಾರವನ್ನು ಕೊಡಲಿದ್ದೇವೆ.
ಯಡಿಯೂರಪ್ಪನವರು ಒಂದು ಲಕ್ಷ ಕೋಟಿ ಹಣ ನೀರಾವರಿಗೆ ಮೀಸಲಿಡುವುದಾಗಿ ತಿಳಿಸಿದ್ದಾರೆ. ವಾಜಪೇಯಿ ಕನಸನ್ನು ನನಸು ಮಾಡುವ ಹಾದಿಯಲ್ಲಿ ಪ್ರಧಾನಿ ಸಾಗುತ್ತಿದ್ದಾರೆ. ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ.
ಬಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರಗೌಡ, ಸುಜಾತಮ್ಮ, ಬಳುವನಹಳ್ಳಿ ಶ್ರೀಧರ್, ಮಂಜುಳಮ್ಮ, ನಗರಸಭಾ ಸದಸ್ಯ ರಾಘವೇಂದ್ರ ಹಾಜರಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.
Captcha verification failed!
CAPTCHA user score failed. Please contact us!
error: Content is protected !!