ಶಾಶ್ವತ ನೀರಾವರಿ ಹೋರಾಟಕ್ಕೆ ಬೆಂಬಲ

- Advertisement -
- Advertisement -

ಜಿಲ್ಲೆಯ ಚದಲಪುರ ಕ್ರಾಸ್ನಲ್ಲಿ ನಡೆಯುತ್ತಿರುವ ಅನಿರ್ಧಿಷ್ಠಾವಧಿ ಶಾಶ್ವತ ನೀರಾವರಿ ಹೋರಾಟಕ್ಕೆ ತಾಲ್ಲೂಕಿನ ದೇವರಮಳ್ಳೂರು ಗ್ರಾಮ ಪಂಚಾಯತಿಯ ಗ್ರಾಮಸ್ಥರು ಬೆಂಬಲ ಸೂಚಿಸಿ ಮನವಿ ಪತ್ರ ಸಲ್ಲಿಸಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕಾದ್ಯಕ್ಷ ತಾದೂರು ಮಂಜುನಾಥ್ ಮಾತನಾಡಿ, ಚಿಕ್ಕಬಳ್ಳಾಪುರ- ಕೋಲಾರ ಜಿಲ್ಲೆ ಬರಪೀಡಿತ ಪ್ರದೇಶಗಳಾಗಿದ್ದು ಸಾವಿರಾರು ಅಡಿ ಕೊರೆದರೂ ಸಹ ನೀರು ಸಿಗದೆ ವಿಷಯುಕ್ತ ಪ್ಲೋರೈಡ್ ನೀರು ಕುಡಿಯುತ್ತಿದ್ದೇವೆ. ರೋಗಗಳಿಗೆ ತುತ್ತಾಗುತ್ತಿದ್ದೇವೆ. ಜಿಲ್ಲೆಯಲ್ಲಿ ಶಾಶ್ವತ ನೀರಾವರಿ ಹೋರಾಟ ನಡೆಯುತ್ತಿದ್ದು ೨೪ ದಿನಗಳಿಂದ ನಿರಂತರವಾಗಿ ಹೋರಾಟ ನಡೆಯುತ್ತಿದ್ದು ವಿವಿಧ ಸಂಘಟನೆಗಳು ಬೆಂಬಲ ನೀಡುತ್ತಿದ್ದಾರೆ. ಪರಮಶಿವಯ್ಯನವರ ವರದಿ ಜಾರಿಯಾಗುವವರೆಗೂ ಸಹ ಯಾವುದೇ ಕಾರಣಕ್ಕೂ ಸಹ ಪ್ರತಿಭಟನೆಯನ್ನು ಹಿಂತೆಗೆಯುವುದಿಲ್ಲವೆಂದು ತಿಳಿಸಿದರು.
ತಾಲ್ಲೂಕಿನ ದೇವರ ಮಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ವೀರಾಪುರ, ಬೂದಾಳ, ಸೊಣ್ಣೇನಹಳ್ಳಿ, ತಲದುಮ್ಮನಹಳ್ಳಿ, ಇದ್ಲೂಡು, ಕುತ್ತಾಂಡಹಳ್ಳಿ, ಬೊಮ್ಮನಹಳ್ಳಿ ಗ್ರಾಮಗಳಿಂದ ಶಾಶ್ವತ ನೀರಾವರಿ ಹೋರಾಟವನ್ನು ಬೆಂಬಲಿಸಿ ನಗರದ ತಾಲ್ಲೂಕು ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ ಶಿರಸ್ತೆದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ ಜಿಲ್ಲೆಯ ಚದಲಪುರ ಕ್ರಾಸ್ ಬಳಿ ನಡೆಯುತ್ತಿರುವ ಹೋರಾಟಕ್ಕೆ ತೆರಳಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕಾದ್ಯಕ್ಷ ತಾದೂರು ಮಂಜುನಾಥ್, ಉಪಾಧ್ಯಕ್ಷ ಅಂಜನೇಯರೆಡ್ಡಿ, ರೈತ ಮುಖಂಡರು, ಗ್ರಾಮಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!