ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ನಡೆದ ಶಿಕ್ಷಕರಿಗೆ ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಆಯೋಜಿಸಿದ್ದ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆ ಮಾಹಿತಿ ಶಿಬಿರದಲ್ಲಿ ಕಸಾಪ ತಾಲ್ಲೂಕು ಅಧ್ಯಕ್ಷ ಎ.ಎಂ.ತ್ಯಾಗರಾಜ್ ಮಾತನಾಡಿದರು.
ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯ ಬಗ್ಗೆ ತಿಳಿದುಕೊಳ್ಳುವುದು ಹಾಗೂ ಗೌರವ ಸೂಚಿಸುವುದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಕರ್ತವ್ಯವಾಗಿದೆ ಎಂದು ಅವರು ತಿಳಿಸಿದರು.
ಪಿಂಗಳಿ ವೆಂಕಯ್ಯನವರಿಂದ ರೂಪುಗೊಂಡ ನಮ್ಮ ಧ್ವಜಕ್ಕೆ ಅದರದ್ದೇ ಆದ ಕೆಲವು ವಿಶೇಷತೆಗಳಿವೆ. ಧ್ವಜದ ವಿನ್ಯಾಸ, ಅಳತೆ, ಹಿರಿಮೆ ಸೇರಿದಂರೆ ನಮ್ಮ ರಾಷ್ಟ್ರಧ್ವಜದ ಬಗೆಗಿನ ಅನೇಕ ವಿಚಾರಗಳನ್ನು ನಾವುಗಳು ತಿಳಿದಿರಲೇಬೇಕು ಎಂದು ಹೇಳಿದರು.
ಬಿ.ಆರ್.ಸಿ ಸಮನ್ವಯಾಧಿಕಾರಿ ಎನ್.ತ್ಯಾಗರಾಜ್ ಮಾತನಾಡಿ, ದೇಶಪ್ರೇಮದ ಸಂಕೇತವಾಗಿರುವ ನಮ್ಮ ತ್ರಿವರ್ಣ ಧ್ವಜ ಹಲವು ವಿಶೇಷತೆಗಳಿಂದ ಕೂಡಿದೆ. ಹಲವು ಸ್ವಾತಂತ್ರ್ಯ ಹೋರಾಟಗಾರರು, ಮಹಾನ್ ನಾಯಕರು ಸೇರಿ ನಮ್ಮ ರಾಷ್ಟ್ರಧ್ವಜಕ್ಕೆ ಸುಂದರ ರೂಪ ನೀಡಿದ್ದಾರೆ. ಪ್ರತಿಯೊಬ್ಬ ಶಿಕ್ಷಕರಿಗೂ ರಾಷ್ಟ್ರಧ್ವಜದ ಮಾಹಿತಿ, ಕಲ್ಪನೆ ಇರಬೇಕು ಎಂದರು.
ಭಾರತ ಸೇವಾದಳದ ಜಿಲ್ಲಾ ಸಮಿತಿ ಸದಸ್ಯ ಸತೀಶ್, ಜಿಲ್ಲಾ ಸಂಘಟಕ ಪ್ರಕಾಶ್ ಮತ್ತು ರಾಜ್ಯ ಸಂಪನ್ಮೂಲ ಶಿಕ್ಷಕ ವೆಂಕಟರೆಡ್ಡಿ ಅವರು ರಾಷ್ಟ್ರಗೀತೆ ಮತ್ತು ರಾಷ್ಟ್ರಧ್ವಜದ ಅಂಗೀಕಾರದ ದಿನಾಂಕ ಅನುಮೋದನೆ ಮುಂತಾದ ವಿಚಾರಗಳ ಕುರಿತಂತೆ ಸಂಪೂರ್ಣ ಮಾಹಿತಿ ತಿಳಿಸಿದರು.
ಇ.ಸಿ.ಒ ಭಾಸ್ಕರಗೌಡ, ಶಿಕ್ಷಕಿ ಅನ್ನಪೂರ್ಣ ಹಾಜರಿದ್ದರು.
- Advertisement -
- Advertisement -
- Advertisement -







