ಸರ್ಕಾರಿ ಶಾಲೆಯಲ್ಲಿ ಭೋದನೆ ಮಾಡುವ ಶಿಕ್ಷಕರು ನಿಷ್ಠೆ ಮತ್ತು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳು ಮತ್ತು ಪೋಷಕರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರಘುನಾಥ್ರೆಡ್ಡಿ ಹೇಳಿದರು.
ತಾಲ್ಲೂಕಿನ ಈ.ತಿಮ್ಮಸಂದ್ರದ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಗೆ ಮಂಗಳವಾರ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ನಂತರ ಮಾತನಾಡಿದ ಅವರು ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದಿಲ್ಲ ಎಂದು ಪೋಷಕರ ಮನದಲ್ಲಿ ಮೂಡಿರುವ ಅಪನಂಬಿಕೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಶಿಕ್ಷಕರು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕೆಂದು ಕಿವಿಮಾತು ಹೇಳಿದರು.
ಸರ್ಕಾರ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ವ್ಯಾಸಂಗ ಮಾಡುವ ಪ್ರತಿಯೊಂದು ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕೆಂದು ಕೋಟ್ಯಾಂತರ ರೂಗಳನ್ನು ಖರ್ಚು ಮಾಡಿ ಸುಸಜ್ಜಿತ ಕೊಠಡಿಗಳು, ಭೋದನಾ ಸಾಮಾಗ್ರಿಗಳು, ಶಾಲೆಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ, ಉಚಿತ ಸಮವಸ್ತ್ರ, ಪಠ್ಯಪುಸ್ತಕ, ವಿದ್ಯಾರ್ಥಿವೇತನ ಸೇರಿದಂತೆ ಇನ್ನಿತರೆ ಸೌಲಭ್ಯಗಳನ್ನು ನೀಡುತ್ತಿದ್ದು ಅದನ್ನು ಪೋಷಕರು ಸದುಪಯೋಗ ಮಾಡಿಕೊಂಡು ತಮ್ಮ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿ ಸೇರಿಸಿಬೇಕೆಂದು ಮನವಿ ಮಾಡಿದರು.
ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ಸಂವಾದ ನಡೆಸಿ ಶೈಕ್ಷಣಿಕ ಗುಣಮಟ್ಟವನ್ನು ಪರೀಕ್ಷೆ ಮಾಡಿದರು. ಇದೇ ವೇಳೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಮಧ್ಯಾಹ್ನದ ಬಿಸಿಯೂಟವನ್ನು ಸೇವಿಸಿ ತೃಪ್ತಿ ವ್ಯಕ್ತಪಡಿಸಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಮುಖ್ಯಶಿಕ್ಷಕರು ಅಡುಗೆ ಸಿಬ್ಬಂದಿ ಸಮನ್ವಯದಿಂದ ಜಾಗೃತಿವಹಿಸಿಬೇಕೆಂದು ಸೂಚಿಸಿದರು.
ಖಾಸಗಿ ಶಾಲೆಯ ಮಾದರಿಯ ವಿದ್ಯಾರ್ಥಿಗಳು: ಸರ್ಕಾರಿ ಉರ್ದು ಶಾಲೆಯ ಎಲ್ಲಾ ಮಕ್ಕಳು ಸಮವಸ್ತ್ರವನ್ನು ಧರಿಸಿ, ಕೊರಳಿಗೆ ಟೈ, ಬೆಲ್ಟ್ ಮತ್ತು ಗುರುತಿನಚೀಟಿಯೊಂದಿಗೆ ಹಾಜರಾಗಿದ್ದರಲ್ಲದೇ ಪಾಠಪ್ರಚನಗಳನ್ನು ಕೇಳಿಕೊಳ್ಳುತ್ತಿದ್ದನ್ನು ಕಂಡುಬಂದಿತ್ತು, ಶಿಕ್ಷಕರ ಸೇವೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಶಂಸಿದರು.
- Advertisement -
- Advertisement -
- Advertisement -
- Advertisement -