ಶಿಕ್ಷಕ ವೃತ್ತಿ ಪವಿತ್ರವಾದದ್ದು. ಅದನ್ನು ಉತ್ತಮವಾಗಿ ನಿರ್ವಹಿಸುವವರನ್ನು ಗುರುತಿಸಿ ಗೌರವಿಸುವ ಕೆಲಸ ಆಗಬೇಕು ಎಂದು ಕರ್ಣಶ್ರೀ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಶಿವಕುಮಾರ ಗೌಡ ತಿಳಿಸಿದರು.
ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಪಾತ್ರರಾದ ಶಿಕ್ಷಕಿ ಎಂ.ವಿ.ವೆಂಕಟರತ್ನಮ್ಮ ಅವರಿಗೆ ಸನ್ಮಾನ ಮಾಡಿ ಅವರು ಮಾತನಾಡಿದರು.
ನಿತ್ಯ ಮಕ್ಕಳಿಗೆ ಸಂಸ್ಕಾರ, ಜ್ಞಾನ, ಮಾನವೀಯ ಮೌಲ್ಯಗಳನ್ನು ಧಾರೆಯೆರೆಯುವ ಮಾರ್ಗದರ್ಶಕರಾಗಿ ಕೆಲಸ ಮಾಡುವ ಕಾಯಕ ಶಿಕ್ಷಕರದ್ದಾಗಿದೆ. ಒಳ್ಳೆಯ ವಿಚಾರವಂತಿಕೆ, ಹೃದಯವಂತಿಕೆ ಹಾಗೂ ಮಾನವೀಯ ಮೌಲ್ಯಗಳನ್ನು ಎಲ್ಲರೂ ಹೊಂದುವುದು ಅಗತ್ಯವಾಗಿ ಆಗಬೇಕಾಗಿದೆ. ಗುರುಹಿರಿಯರನ್ನು ಗೌರವಿಸುವ ಮೂಲಕ ಸಜ್ಜನರಾಗುವಂತೆ ಮಕ್ಕಳಿಗೆ ಹೇಳಿದರು.
ಬಿಜೆಪಿ ತಾಲ್ಲೂಕು ಅಧ್ಯಕ್ಷ ಬಿ.ಸಿ.ನಂದೀಶ್, ಸುರೇಂದ್ರಗೌಡ, ಗ್ರಾಮ ಪಂಚಾಯ್ತಿ ಸದಸ್ಯ ಎ.ಎಂ.ತ್ಯಾಗರಾಜು, ರವಿಚಂದ್ರ, ಕೃಷ್ಣರೆಡ್ಡಿ, ಪ್ರಸ್ನನಕುಮಾರ್, ಸುಜಾತಮ್ಮ, ಮುರಳಿಮೋಹನ್ ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -