Home News ಶಿಡ್ಲಘಟ್ಟಕ್ಕೆ 23 ರಂದು ಡಾ.ಎನ್.ಆರ್.ನಾರಾಯಣಮೂರ್ತಿ ಭೇಟಿ

ಶಿಡ್ಲಘಟ್ಟಕ್ಕೆ 23 ರಂದು ಡಾ.ಎನ್.ಆರ್.ನಾರಾಯಣಮೂರ್ತಿ ಭೇಟಿ

0

ಇನ್ಫೋಸಿಸ್ ಸಂಸ್ಥಾಪಕ ಡಾ.ಎನ್.ಆರ್.ನಾರಾಯಣಮೂರ್ತಿ ತಮ್ಮ ಹುಟ್ಟೂರು ಶಿಡ್ಲಘಟ್ಟಕ್ಕೆ ನವೆಂಬರ್ 23 ರ ಭಾನುವಾರದಂದು ಆಗಮಿಸುತ್ತಿದ್ದಾರೆ.
ವಿಪ್ರ ಪ್ರತಿಭಾ ಪುರಸ್ಕಾರ ಮತ್ತು ಸೇವಾ ಟ್ರಸ್ಟ್ ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಬೆಳಿಗ್ಗೆ 11 ಗಂಟೆಗೆ ಆಯೋಜಿಸಿರುವ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭದಲ್ಲಿ ವಿಪ್ರ ಜನಾಂಗದ ಪ್ರತಿಭಾವಂತರು ಮತ್ತು ಸಾಧಕರಿಗೆ ಸನ್ಮಾನಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ.ಡಿ.ಟಿ.ಸತ್ಯನಾರಾಯಣರಾವ್, ಉದ್ಘಾಟನೆಯನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಡಾ.ಬಿ.ಎನ್.ವಿ.ಸುಬ್ರಮಣ್ಯ, ಮುಖ್ಯ ಅತಿಥಿಗಳಾಗಿ ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಎಸ್.ಪಿ.ಕುಲಕರ್ಣಿ, ಶಾಸಕ ಎಂ.ರಾಜಣ್ಣ, ಬಿ.ವಿ.ಮಂಜುನಾಥ್, ಬಿ.ಸಿ.ಸೀತಾರಾಮರಾವ್, ಪ್ರಸನ್ನಕುಮಾರ್, ಎನ್.ಕೆ.ಗುರುರಾಜರಾವ್ ಭಾಗವಹಿಸುವರು.
ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಜನಿಸಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿಪ್ರರಾದ ಡಾ.ಕೃಷ್ಣಮೂರ್ತಿ ವೆಂಕಟರಾಮ್, ಬಿ.ವಿ.ಪಾಂಡುರಂಗರಾವ್, ಎನ್.ಆರ್.ಸಮರ್ಥರಾಮ್, ಕ್ರಮಧಾತಿ ಶ್ರೀಧರ್, ಕ್ಯಾಪ್ಟನ್ ಸುನಿಲ್ ಕುಮಾರ್ ಅವರನ್ನು ಸನ್ಮಾನಿಸಲಾಗುತ್ತದೆ.