34.1 C
Sidlaghatta
Friday, March 29, 2024

ಶಿಡ್ಲಘಟ್ಟದಲ್ಲಿ ಕನಕದಾಸರ ಜಯಂತೋತ್ಸವ ಆಚರಣೆ

- Advertisement -
- Advertisement -

ಪ್ರಾಪಂಚಿಕ ಆಸೆಗಳಿಂದ ಮುಕ್ತರಾಗಿದ್ದ. ಯಾವುದೇ ಜಾತಿ, ಕುಲ, ಮತ, ಧರ್ಮವೆನ್ನದೆ ಪ್ರಪಂಚದಲ್ಲಿರುವ ಎಲ್ಲಾ ಮನುಕುಲವೂ ಉದ್ದಾರವಾಗಬೇಕು ಎಂದು ಸಾರಿದ ಕನಕದಾಸರ ಆದರ್ಶಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ರೂಡಿಸಿಕೊಳ್ಳಬೇಕು ಎಂದು ಚಿಕ್ಕಬಳ್ಳಾಪುರ ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಕೋಡಿರಂಗಪ್ಪ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿಯ ಮುಂಭಾಗದಲ್ಲಿ ಶನಿವಾರ ತಾಲ್ಲೂಕು ಆಡಳಿತದ ವತಿಯಿಂದ ಏರ್ಪಡಿಸಲಾಗಿದ್ದ ದಾಸಶ್ರೇಷ್ಠ ಕನಕದಾಸರ ೫೨೭ ನೇ ವರ್ಷದ ಜಯಂತ್ಯುತ್ಸವ ಕಾರ್ಯಕ್ರಮದ ಮುಖ್ಯಭಾಷಣಕಾರರಾಗಿ ಅವರು ಮಾತನಾಡಿದರು.
ಕನಕದಾಸರು ಕೇವಲ ದಾಸಶ್ರೇಷ್ಠರು ಮಾತ್ರವಲ್ಲದೇ ಅತ್ಯುತ್ತಮ ಸಾಹಿತಿ, ಕವಿ, ಗಾಯಕರಾಗಿದ್ದು ಜಾತಿ ನಿರ್ಮೂಲನೆ ಮಾಡುವಲ್ಲಿ ಶ್ರಮಿಸಿದಂತಹ ಮಹಾಪುರುಷನನ್ನು ಕೇವಲ ಒಂದು ಜಾತಿಗೆ ಸೀಮಿತಗೊಳಿಸದೇ ಕನಕದಾಸರ ಜಯಂತಿಯನ್ನು ಎಲ್ಲಾ ವರ್ಗಗಳವರೂ ಸೇರಿ ಆಚರಿಸಬೇಕೆಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಎಂ.ರಾಜಣ್ಣ ಮಾತನಾಡಿ ಕುಲ ಕುಲವೆಂದು ಹೊಡೆದಾಡಬೇಡಿ, ಕುಲಗಳು ಹುಟ್ಟಿದ್ದು ಎಲ್ಲಿ ಎಂಬುದನ್ನು ಅರ್ಥಮಾಡಿಕೊಂಡಿದ್ದಾದರೆ ಜಾತಿ ಸಂಘರ್ಷಗಳಿಗೆ ಅವಕಾಶವಿರುವುದಿಲ್ಲವೆಂದು ಸಾರಿದ ಕನಕದಾಸರು ಸುಮಾರು ಐದು ಶತಮಾನಗಳಿಂದ ಜನರ ಮನಸ್ಸಿನಲ್ಲಿ ಅಚ್ಚಳಿಯದೇ ನೆಲೆಸಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಕುರುಬ ಸಮಾಜದವರಿಂದ ತಲೆಯ ಮೇಲೆ ತೆಂಗಿನಕಾಯಿಯನ್ನು ಹೊಡೆಯುವಂತಹ ವಿಶಿಷ್ಠ ಆಚರಣೆಯನ್ನು ನೆರವೇರಿಸಲಾಯಿತು. ಎಸ್.ಎಸ್.ಎಲ್.ಸಿ. ಪಿ.ಯು.ಸಿ., ಪದವಿ ತರಗತಿಗಳಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದ್ದ ಕುರುಬ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಸಮಾಜದ ಹಿರಿಯ ಮುಖಂಡರನ್ನೂ ಸನ್ಮಾನಿಸಿ ಗೌರವಿಸಲಾಯಿತು.
ತಹಸೀಲ್ದಾರ್ ಜಿ.ಎ.ನಾರಾಯಣಸ್ವಾಮಿ, ಜಿಲ್ಲಾ ಪಂಚಾಯತಿ ಸದಸ್ಯ ಎಸ್.ಎಂ.ನಾರಾಯಣಸ್ವಾಮಿ, ಕುರುಬರ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಮಂಜುನಾಥ್, ಗೌರವಾಧ್ಯಕ್ಷ ಎಂ.ಗಣೇಶಪ್ಪ, ಪಿ.ಎಲ್.ಡಿ.ಬ್ಯಾಂಕಿನ ಅಧ್ಯಕ್ಷ ಎ.ರಾಮಚಂದ್ರಪ್ಪ, ಕೋಚಿಮುಲ್ ನಿರ್ದೇಶಕ ಬಂಕ್ಮುನಿಯಪ್ಪ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಎನ್.ಮುನಿಯಪ್ಪ, ಪುರಸಭೆ ಸದಸ್ಯ ಅಪ್ಸರ್ಪಾಷ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರಘುನಾಥರೆಡ್ಡಿ, ತಾಲ್ಲೂಕು ವೈದ್ಯಾಧಿಕಾರಿ ಡಾ.ಅನಿಲ್ಕುಮಾರ್, ಪುರಸಭಾ ಮುಖ್ಯಾಧಿಕಾರಿ ಎಸ್.ಎ.ರಾಮ್ಪ್ರಕಾಶ್, ತಾಲ್ಲೂಕು ಪಂಚಾಯತಿ ಇಒ ಗಣಪತಿಸಾಕರೆ, ಎ.ನಾಗರಾಜ್, ಎಸ್.ಮಂಜುನಾಥ್, ರಾಮಾಂಜಿನಪ್ಪ, ಮಂಜುಳಮ್ಮ ಮತ್ತಿತರರು ಹಾಜರಿದ್ದರು.
[images cols=”six” lightbox=”true”]
[image link=”2146″ image=”2146″]
[image link=”2145″ image=”2145″]
[image link=”2144″ image=”2144″]
[image link=”2143″ image=”2143″]
[image link=”2142″ image=”2142″]
[image link=”2141″ image=”2141″]
[/images]
 
 

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!