ನಗರದಲ್ಲಿ ಗಂಗಾದೇವಿಯ ಜಾತ್ರಾಮಹೋತ್ಸವ ಕಾರ್ಯಕ್ರಮ ಮಂಗಳವಾರ ವಿಜೃಂಭಣೆಯಿಂದ ನೆರವೇರಿತು.
ಪ್ರತಿವರ್ಷದಂತೆ ಈ ವರ್ಷವೂ ಕೂಡಾ ಗಂಗಾದೇವಿಯ ಜಾತ್ರಾಮಹೋತ್ಸವವನ್ನು ವಿಜೃಂಭಣೆಯಿಂದ ನಡೆಸಿದ ನಗರದ ಜನತೆ, ವಿವಿಧ ಹೂಗಳಿಂದ ಅಲಂಕರಿಸಿದ ದೀಪಗಳನ್ನು ಹೊತ್ತುಕೊಂಡು ಮೆರವಣಿಗೆಯಲ್ಲಿ ದೇವಾಲಯಗಳಿಗೆ ಹೋಗಿ ಬೆಳಗಿದರು.
ಜಾತ್ರಾ ಮಹೋತ್ಸವದ ಅಂಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ದೀಪಗಳ ಮೆರವಣಿಗೆ ನಡೆಸಲಾಯಿತು, ವಿವಿಧ ಜಾನಪದ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ಚಿಕ್ಕಬಳ್ಳಾಪುರ ರಸ್ತೆಯಲ್ಲಿರುವ ಅಮಾನಿಕೆರೆಗೆ ದೀಪಗಳೊಂದಿಗೆ ತೆರಳಿದ ಮಹಿಳೆಯರು ಈ ಬಾರಿಯಾದರೂ ಉತ್ತಮವಾದ ಮಳೆ ಬೆಳೆಗಳು ಆಗಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ವಾಸವಿ ಕಲ್ಯಾಣಮಂಟಪದ ಸಮೀಪದಲ್ಲಿರುವ ಗಂಗಾದೇವಿಯ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು, ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.
- Advertisement -
- Advertisement -
- Advertisement -
- Advertisement -