17.1 C
Sidlaghatta
Sunday, November 9, 2025

ಶಿಡ್ಲಘಟ್ಟದಲ್ಲಿ ಶಿವರಾತ್ರಿಯ ಪ್ರಯುಕ್ತ ಪಂಚಲಿಂಗ ದರ್ಶನ

- Advertisement -
- Advertisement -

ತಾಲ್ಲೂಕಿನಾದ್ಯಂತ ಮಹಾ ಶಿವರಾತ್ರಿಯನ್ನು ಜನರು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಶುಕ್ರವಾರ ಬೆಳಿಗ್ಗೆಯಿಂದಲೇ ಶಿವನ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಭಕ್ತರು ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.
ಮಹಾಶಿವರ್ರಾತಿಯಂದು ನಗರದಲ್ಲಿರುವ ಕೋಟೆ ಸೋಮೇಶ್ವರ, ಪೇಟೆ ನಗರೇಶ್ವರ, ಅಶೋಕ ರಸ್ತೆಯ ಕಾಶಿ ವಿಶ್ವನಾಥೇಶ್ವರ, ಅಗ್ರಹಾರದ ಶಂಕರ ಮಠದಲ್ಲಿನ ಏಕಾಂಭರೇಶ್ವರ ಮತ್ತು ಶಾಮಣ್ಣಬಾವಿ ಬಳಿಯ ಜಲಕಂಠೇಶ್ವರ ದರ್ಶನ ಪಡೆದಲ್ಲಿ ಕೈಲಾಸ ಪ್ರಾಪ್ತಿ ಎಂಬ ಪ್ರತೀತಿ ಇದ್ದು ನೂರಾರು ಜನ ಭಕ್ತರು ನಗರದಲ್ಲಿನ ಪಂಚಲಿಂಗ ದರ್ಶನ ಪಡೆದರು.
ಇದಲ್ಲದೆ, ಮಯೂರ ವೃತ್ತದ ಬಳಿಯ ಚಂದ್ರಶೇಖರ, ಬೂದಾಳದ ಮಲೆಮಲ್ಲೇಶ್ವರ, ವೀರಾಪುರದ ಗವಿಗಂಗಾಧರೇಶ್ವರ, ಬಟ್ರೇನಹಳ್ಳಿಯ ಸಾಯಿಬಾಬ ಮಂದಿರದಲ್ಲಿರುವ ಜಲಕಂಠೇಶ್ವರ ಮುಂತಾದ ಪ್ರಮುಖ ದೇವಾಲಯಗಳಲ್ಲಿ ಶಿವರಾತ್ರಿಯ ಪ್ರಯುಕ್ತ ವಿಶೇಷ ಪೂಜೆ ಆಯೋಜಿಸಲಾಗಿತ್ತು.
ನಗರದ ಅಶೋಕ ರಸ್ತೆಯಲ್ಲಿರುವ ದ್ವಿಮುಖ ಗಣಪತಿ ದೇವಾಲಯದಲ್ಲಿ ಕೈಲಾಸ ಅಲಂಕಾರದೊಂದಿಗೆ ಗಣಪತಿಯನ್ನು ಅಲಂಕರಿಸಿದ್ದುದು ನೋಡುಗರ ಕಣ್ಮನ ಸೆಳೆಯುವಂತಿತ್ತು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!