ಶಿಡ್ಲಘಟ್ಟದ ‘ಊರದೇವರು’, ಪುರಾತನ ಪ್ರಸಿದ್ಧ ವೇಣುಗೋಪಾಲಸ್ವಾಮಿಯ ಬ್ರಹ್ಮರಥೋತ್ಸವ

- Advertisement -
- Advertisement -

ನಗರದ ಪುರಾತನ ಪ್ರಸಿದ್ಧ ವೇಣುಗೋಪಾಲಸ್ವಾಮಿಯ ಬ್ರಹ್ಮರಥೋತ್ಸವ ಕಾರ್ಯಕ್ರಮ ಗುರುವಾರ ವಿಜೃಂಭಣೆಯಿಂದ ನಡೆಯಿತು. ‘ಊರದೇವರು’ ಎಂದೇ ಪ್ರಸಿದ್ಧ­ವಾದ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಬ್ರಹ್ಮರಥೋತ್ಸವ ಸಹಿತ ಎಲ್ಲ ಕೈಂಕರ್ಯಗಳು ಪಾಂಚರಾತ್ರಾಗಮ ಪದ್ಧತಿ­ಯಲ್ಲಿ ಕೈಗೊಳ್ಳಲಾಯಿತು.
ದೇಗು­ಲದಲ್ಲಿ ಬೆಳಿಗ್ಗೆಯಿಂದಲೇ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಶಾಸಕ ಎಂ.ರಾಜಣ್ಣ ಮತ್ತು ಗ್ರೇಡ್‌ 2 ತಹಶೀಲ್ದಾರ್‌ ಮುನಿಕೃಷ್ಣಪ್ಪ ರಥೋತ್ಸವಕ್ಕೆ ಚಾಲನೆ ನೀಡಿ­ದರು. ಭಕ್ತಾದಿಗಳು ಶ್ರದ್ಧಾ ಭಕ್ತಿಯಿಂದ ಪಾಲ್ಗೊಂಡರು. ತಮಟೆ ವಾದನ, ಮಂಗಳ ವಾದ್ಯಗಳ ಮಧ್ಯೆ ರಥವನ್ನು ಅಶೋಕ ರಸ್ತೆಯಲ್ಲಿ ಮೆರವಣಿಗೆ ಮಾಡ­­ಲಾಯಿತು. ಮಹಿಳೆಯರು ತೆಂಗಿನಕಾಯಿ ಒಡೆದು, ಪೂಜೆ ಸಲ್ಲಿಸಿ, ಆರತಿ ಮಾಡಿದರು. ಮಯೂರ ವೃತ್ತ­ದಲ್ಲಿ ಪಾನಕ ಮತ್ತು ಹೆಸರುಬೇಳೆ ಕೋಸಂಬರಿ ಹಂಚಲಾಯಿತು.
ಈ ಹಿಂದೆ ಅಶೋಕ ರಸ್ತೆಯು ಕಿರಿ­ದಾಗಿತ್ತು. ಆ ಕಾರಣಕ್ಕೆ ದೊಡ್ಡದಾದ ಬ್ರಹ್ಮ ರಥವನ್ನು ರಸ್ತೆ ಕೊನೆಯಲ್ಲಿ ತಿರು­ಗಿಸಲು ಸಾಧ್ಯವಾಗುತ್ತಿರಲಿಲ್ಲ. ಆದ್ದರಿಂದ ದೇವರನ್ನೇ ತಿರುಗಿಸಿ ರಥವನ್ನು ಹಿಂಬದಿ­ಯಿಂದ ಎಳೆದು ತರಲಾಗುತ್ತಿತ್ತು. ಹೀಗಾಗಿ ‘ಶಿಡ್ಲಘಟ್ಟ ದೇವರು ಹಿಂದು­ಮುಂದು’ ಎಂಬ ಮಾತು ಚಾಲ್ತಿ­ಗೆ ಬಂದಿತು ಎಂದು ಭಕ್ತರೊಬ್ಬರು ನೆನಪಿಸಿ­ಕೊಂಡರು.
ವೇಣುಗೋಪಾಲಸ್ವಾಮಿ ದೇಗುಲ­ದಲ್ಲಿ ಸೋಮವಾರದಿಂದ ಪ್ರಾರಂಭ­ವಾದ ಪೂಜಾ ಕಾರ್ಯಕ್ರಮಗಳು ವಾರದ ಕಾಲ ನಡೆಯಲಿದ್ದು, ನಗರದ ಎಲ್ಲ ಜಾತಿಯವರೂ ವಿವಿಧ ಕೈಂಕರ್ಯ­ಗಳಲ್ಲಿ ಭಾಗಿಯಾಗುವುದು ವಿಶೇಷ­ವಾಗಿದೆ.
ನಗರಸಭೆ ಆಯುಕ್ತ ಚಲಪತಿ, ದೇಗುಲ ಸಮಿತಿ ಸಂಚಾಲಕ ರೂಪಸಿ ರಮೇಶ್‌, ಅರ್ಚಕ ವೈ.ಎನ್‌.ದಾಶರಥಿಭಟ್ಟಾಚಾರ್ಯ, ಶ್ರೀ ವೇಣುಗೋಪಾಲಸ್ವಾಮಿ ಸೇವಾ ಮತ್ತು ಅಭಿವೃದ್ಧಿ ಟ್ರಸ್ಟ್‌ ಅಧ್ಯಕ್ಷ ಬಿ.ಪಿ.ರಾಘವೇಂದ್ರ, ಬಾಲಕೃಷ್ಣ, ಬಂಗಾರು ಶ್ರೀನಿವಾಸ್‌ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!