Home News ಶಿಡ್ಲಘಟ್ಟದ ನೆಹರೂ ಕ್ರೀಡಾಂಗಣದಲ್ಲಿ 69ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ

ಶಿಡ್ಲಘಟ್ಟದ ನೆಹರೂ ಕ್ರೀಡಾಂಗಣದಲ್ಲಿ 69ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ

0

ಸುಂದರ, ಸಭ್ಯ, ಸ್ವಚ್ಛ ಹಾಗೂ ಸುಸಂಸ್ಕೃತ ನಾಡನ್ನಾಗಿಸಲು ಎಲ್ಲರೂ ಕೈಜೋಡಿಸುವಂತೆ ಶಾಸಕ ಎಂ.ರಾಜಣ್ಣ ಕರೆ ನೀಡಿದರು.
ನಗರದ ನೆಹರೂ ಕ್ರೀಡಾಂಗಣದಲ್ಲಿ ಶನಿವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ 69ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ನಾಡಿನ ಜ್ವಲಂತ ಸಮಸ್ಯೆಗಳನ್ನು ನಿವಾರಿಸಲು ಹಾಗೂ ಅದನ್ನು ಪರಿಹರಿಸಲು ಆತ್ಮಾವಲೋಕನ ಮಾಡಿಕೊಳ್ಳುವ ವಿಶೇಷ ದಿನವಿದು. ಹಲವಾರು ಬಲಿದಾನಗಳಿಂದ ಸಿಕ್ಕ ಸ್ವಾತಂತ್ರ್ಯವನ್ನು ದೇಶದ ಅಭ್ಯುದಯಕ್ಕಾಗಿ ಶ್ರಮಿಸುವ ಮೂಲಕ ಆಚರಿಸಬೇಕು. ಸ್ವತಂತ್ರ್ಯ ಚಳುವಳಿಯಲ್ಲಿ ಆತ್ಮಾರ್ಪಣೆ ಮಾಡಿಕೊಂಡ ಸರ್ವ ಮಹಾನುಭಾವರನ್ನು ನಾವು ದಿನ ನಿತ್ಯ ನೆನಯಬೇಕು ಎಂದರು.

ಪಥಸಂಚಲನೆಯನ್ನು ಕುತೂಹಲ ಕಣ್ಣುಗಳಿಂದ ನೋಡುತ್ತಿರುವ ಮಕ್ಕಳು.
ಪಥಸಂಚಲನೆಯನ್ನು ಕುತೂಹಲ ಕಣ್ಣುಗಳಿಂದ ನೋಡುತ್ತಿರುವ ಮಕ್ಕಳು.

ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ ಮಾತನಾಡಿ, ವ್ಯಾಪರಕ್ಕಾಗಿ ಬಂದ ಬ್ರೀಟಿಷರು ನಮ್ಮಲ್ಲಿರುವ ಅರಾಜಕತೆ, ಏಕತೆಯ ಕೊರತೆಯನ್ನು ಮನಗೊಂಡು ಸುಮಾರು ೩೦೦ ವರ್ಷಗಳ ಕಾಲ ನಮ್ಮ ದೇಶವನ್ನು ಗುಲಾಮಗಿರಿಗೆ ತಳ್ಳಿದರು. ಬ್ರೀಟಿಷರನ್ನು ನಮ್ಮ ದೇಶದಿಂದ ಹೊರಗಟ್ಟಲು ಲಕ್ಷಾಂತರ ಜನ ಪ್ರಾಣಾರ್ಪಣೆ ಮಾಡಬೇಕಾಯಿತು. ನಾವೆಲ್ಲರೂ ರಾಜಕೀಯ ಸ್ವಾತಂತ್ರ್ಯವನ್ನು ಮಾತ್ರ ಪಡೆದುಕೊಂಡಿದ್ದೇವೆ. ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯವನ್ನು ಇನ್ನೂ ಪಡೆಯಬೇಕಾಗಿದೆ ಎಂದು ನುಡಿದರು.
ಧ್ವಜಾರೋಹಣೆಯ ನಂತರ ರಾಷ್ಟ್ರಗೀತೆಯನ್ನು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು, ಧ್ವಜಗೀತೆಯನ್ನು ಸರ್ಕಾರಿ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿಗಳು, ರೈತಗೀತೆಯನ್ನು ಆಶಾಕಿರಣ ಅಂಧಮಕ್ಕಳ ಶಾಲೆಯ ವಿದ್ಯಾರ್ಥಿಗಳು, ದೇಶಭಕ್ತಿ ಗೀತೆಯನ್ನು ಪ್ಯಾರೆಗಾನ್ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಹಾಡಿದರು. ಪೊಲೀಸ್ ಹಾಗೂ ವಿವಿಧ ಶಾಲೆಗಳ ವಾದ್ಯವೃಂದದ ಪಥ ಸಂಚಲನ ನಡೆಯಿತು. ನಗರಸಭೆಯಿಂದ ತಂದಿದ್ದ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರದ ತೇರಿಗೆ ಪೂಜೆ ಸಲ್ಲಿಸಲಾಯಿತು.
ಗರುಡಾದ್ರಿ ಶಾಲೆ, ಸರ್ಕಾರಿ ಶಾಲೆ, ಶಾರದಾ ವಿದ್ಯಾಸಂಸ್ಥೆ, ಸರಸ್ವತಿ ವಿದ್ಯಾಸಂಸ್ಥೆ, ಡಾಲ್ಫಿನ್ ವಿದ್ಯಾಸಂಸ್ಥೆ ಮತ್ತು ವಾಸವಿ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ದೇಶಭಕ್ತಿಯನ್ನು ಪ್ರತಿಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ಯೂನಿಟಿ ಸಿಲ್ಸಿಲಾ ಫೌಂಡೇಶನ್ ವತಿಯಿಂದ ಕೋಟೆ ವೃತ್ತದಲ್ಲಿ ಪಥಸಂಚಲನದಲ್ಲಿ ಭಾಗವಹಿಸಿದ್ದ ಎಲ್ಲಾ ವಿದ್ಯಾರ್ಥಿಗಳಿಗೆ ತಿಂಡಿಯನ್ನು ವಿತರಿಸಿಸಲಾಯಿತು.

ನಿವೃತ್ತ ಯೋಧ ಎಸ್.ವಿ.ಅಯ್ಯರ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಯೂನಿಟಿ ಸಿಲ್ಸಿಲಾ ಫೌಂಡೇಶನ್ ವತಿಯಿಂದ ಪಥಸಂಚಲನದಲ್ಲಿ ಭಾಗವಹಿಸಿದ್ದ ಎಲ್ಲಾ ವಿದ್ಯಾರ್ಥಿಗಳಿಗೆ ತಿಂಡಿಯನ್ನು ವಿತರಿಸಿದರು.
ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಂಜಿನಪ್ಪ,ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರಘುನಾಥರೆಡ್ಡಿ, ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ಆಂಜಿನಮ್ಮ ವೆಂಕಟಪ್ಪ, ಉಪಾಧ್ಯಕ್ಷ ಡಿ.ಎಸ್.ಎನ್.ರಾಜು, ನಗರಸಭೆ ಅಧ್ಯಕ್ಷೆ ಮುಷ್ಠರಿ ತನ್ವೀರ್, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಸಿ.ಎಂ.ಗೋಪಾಲ್, ಕೋಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ, ನಗರಸಭೆ ಪ್ರಭಾರ ಆಯುಕ್ತ ರಾಮ್ಪ್ರಕಾಶ್, ಕಾರ್ಯಪಾಲಕ ಎಂಜಿನಿಯರ್ ಗಣಪತಿ. ಎಸ್.ಸಾಕರೆ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಗುರುರಾಜರಾವ್, ಕ.ಸಾಪ ತಾಲ್ಲೂಕು ಅಧ್ಯಕ್ಷ ಶ್ರೀನಿವಾಸ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ, ದೈಹಿಕ ಶಿಕ್ಷಕರಾದ ಶ್ರೀನಿವಾಸ್, ರಂಗನಾಥ್, ಅಗಜಾನನಮೂರ್ತಿ, ವೆಂಕಟರಾಜು, ಮತ್ತಿತರರು ಹಾಜರಿದ್ದರು.

error: Content is protected !!