20.1 C
Sidlaghatta
Friday, January 23, 2026

ಶಿಡ್ಲಘಟ್ಟ ತಾಲ್ಲೂಕು ಕಸಾಪ ವತಿಯಿಂದ ಶಿಕ್ಷಕ ದಿನಾಚರಣೆ

- Advertisement -
- Advertisement -

ಸಿದ್ದಗಂಗಾ ಮಠದಲ್ಲಿ ಶ್ರೀ ಸಿದ್ದಲಿಂಗೇಶ್ವರ ಸನಿವಾಸ ಪ್ರೌಢಶಾಲೆಯಲ್ಲಿ ಗುರುವಾರ ಶಿಡ್ಲಘಟ್ಟ ತಾಲ್ಲೂಕು ಕಸಾಪ ವತಿಯಿಂದ ಶಿಕ್ಷಕ ದಿನಾಚರಣೆಯ ಪ್ರಯುಕ್ತ ಶಿಕ್ಷಕರನ್ನು ಸನ್ಮಾನಿಸಿ ತಾಲ್ಲೂಕು ಕಸಾಪ ಅಧ್ಯಕ್ಷ ಎ.ಎಂ.ತ್ಯಾಗರಾಜ್ ಮಾತನಾಡಿದರು.
ಜಗತ್ತಿನಲ್ಲಿ ಅತ್ಯುತ್ತಮ ವೃತ್ತಿಯೆಂದರೆ ಶಿಕ್ಷಕ ವೃತ್ತಿ. ಉತ್ತಮ ಶಿಕ್ಷಕರು ಕೇವಲ ಕಲಿಸುವವರಲ್ಲ; ಕಲಿಯುತ್ತಲೇ ಇರುವವರು. ವಿದ್ಯೆ, ಸಂಬಂಧ, ಪ್ರೀತಿ, ಬಾಂಧವ್ಯವನ್ನು ಕೇವಲ ಕೊಡುವುದಲ್ಲ, ಪಡೆಯುವ ಪವಿತ್ರ ವೃತ್ತಿಯಿದು ಎಂದು ಅವರು ತಿಳಿಸಿದರು.
ದೇಶದ ಅಭಿವೃಧ್ಧಿಯಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ. ರಾಜಕಾರಣಿ ಹಾಗೂ ಸಮಾಜ ಸುಧಾರಕರಿಂದ ದೇಶವನ್ನು ಸುಧಾರಿಸಲು ಸಾಧ್ಯವಿಲ್ಲ, ಶಿಕ್ಷಕರಿಂದ ಮಾತ್ರ ಸಾಧ್ಯ. ಶಿಕ್ಷಕ ವೃತ್ತಿ ಪವಿತ್ರವಾದದು. ಶಿಕ್ಷಕರು ಸೇವಾ ಮನೋಭಾವದಿಂದ ಕಾರ್ಯ ನಿರ್ವಹಿಸುವುದರಿಂದ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸಲು ಸಾಧ್ಯವಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಿರಿಯ ಶಿಕ್ಷಕ ಟಿ.ಎಸ್.ಪ್ರಭುದೇವ್ ಅವರನ್ನು ಕಸಾಪ ವತಿಯಿಂದ ಸನ್ಮಾನಿಸಲಾಯಿತು. ಸಾಹಿತಿ ಬಿಜಾಪುರ ಭೀಮರಾಯ ಎಸ್.ಹೂಗಾರ ಅವರ “ವಿದ್ಯೆ ಏಕೆ ಕಲಿಯಬೇಕು” ಎಂಬ ಪುಸ್ತಕವನ್ನು ಬಿಡುಗಡೆ ಮಾಡಿ, ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲಾಯಿತು.
ಮುಖ್ಯಶಿಕ್ಷಕ ಎಚ್.ಎಂ.ನಾಗರಾಜ ಮೂರ್ತಿ, ಶಿಕ್ಷಕರಾದ ಜಿ.ಮೋಹನ್ ಕುಮಾರ್, ಬಿ.ಆರ್.ತೀರ್ಥೇಶ್ವರ, ಕೆ.ಟಿ.ಕಿರಣ್ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!