25.1 C
Sidlaghatta
Sunday, November 16, 2025

ಶಿವಕುಮಾರಸ್ವಾಮೀಜಿ ಅವರ ೧೧ನೇ ದಿನದ ಪುಣ್ಯತಿಥಿ

- Advertisement -
- Advertisement -

ಸಿದ್ದಗಂಗಾಮಠದ ಶಿವಕುಮಾರಸ್ವಾಮೀಜಿ ಅವರ ೧೧ನೇ ದಿನದ ಪುಣ್ಯತಿಥಿಯ ಅಂಗವಾಗಿ ಗುರುವಾರ ತಾಲ್ಲೂಕಿನ ಹಲವೆಡೆ ಅನ್ನಸಂತರ್ಪಣೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ನಗರದ ನಗರೇಶ್ವರಸ್ವಾಮಿ ದೇವಾಲಯ, ಭುವನೇಶ್ವರಿ ವೃತ್ತ, ದ್ಯಾವಪ್ಪನಗುಡಿ, ಚೀಮಂಗಲ, ಸುಗಟೂರು ಸೇರಿದಂತೆ ತಾಲ್ಲೂಕಿನ ಹಲವೆಡೆ ಶಿವಕುಮಾರಸ್ವಾಮೀಜಿ ಅವರ ಭಾವಚಿತ್ರವನ್ನು ಇಟ್ಟು ಪೂಜೆ ಸಲ್ಲಿಸಿದ ನಾಗರಿಕರು, ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರಿಗೆಲ್ಲರಿಗೂ ಪ್ರಸಾದದ ರೂಪದಲ್ಲಿ ಅನ್ನಸಂತರ್ಪಣೆ ಮಾಡಿದರು.
ನೆರೆಯ ಚಿಂತಾಮಣಿ ತಾಲ್ಲೂಕಿನಲ್ಲಿ ವಿಷಯುಕ್ತ ಪ್ರಸಾದ ಸೇವನೆ ಮಾಡಿ ಇಬ್ಬರು ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅನ್ನಸಂತರ್ಪಣೆ ಮಾಡುತ್ತಿದ್ದ ಸ್ಥಳಗಳಿಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಸಾದಕ್ಕಾಗಿ ತಯಾರಿಸಿದ್ದ ಆಹಾರವನ್ನು ಪರೀಕ್ಷೆಗೆ ಕಳುಹಿಸಿಕೊಟ್ಟರು.
ಜನರು ಭಕ್ತಿಭಾವದಿಂದ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ನಿರ್ಭೀತಿಯಿಂದ ಪ್ರಸಾದ ಸ್ವೀಕರಿಸಿದರು.
ಶಿವಕುಮಾರಸ್ವಾಮೀಜಿಗಳಲ್ಲಿದ್ದ ಪರೋಪಕಾರವನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕಾಗಿದೆ. ಅವರ ಅನ್ನದಾಸೋಹದ ಜೊತೆಗೆ ಅಕ್ಷರ ದಾಸೋಹವನ್ನು ನೀಡಿ ಸಮಾಜದಲ್ಲಿ ಲಕ್ಷಾಂತರ ಜ್ಯೋತಿಗಳನ್ನು ಬೆಳಗಿಸಿದ್ದಾರೆ ಅವರ ಮಾರ್ಗದರ್ಶನದಲ್ಲಿ ನಡೆಯುವುದು ನಮ್ಮ ಕರ್ತವ್ಯವಾಗಬೇಕು ಎಂದು ಭಕ್ತರು ಮೆಚ್ಚುಗೆ ಹಾಗೂ ಬದ್ಧತೆಯನ್ನು ವ್ಯಕ್ತಪಡಿಸಿದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!