ಶಿವಯೋಗಿ ಸಿದ್ದರಾಮೇಶ್ವರ ಜಯಂತ್ಯುತ್ಸವ ಆಚರಣೆ

- Advertisement -
- Advertisement -

ಪಟ್ಟಣದಲ್ಲಿ ಬುಧವಾರ ಶಿವಯೋಗಿ ಸಿದ್ದರಾಮೇಶ್ವರ ಜಯಂತ್ಯುತ್ಸವವನ್ನು ವಿಜೃಂಭಣೆಯಿಂದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಬೋವಿ ಜನಾಂಗದವರು ಆಚರಿಸಿದರು.
ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಪಲ್ಲಕ್ಕಿಗಳು, ವಿವಿಧ ಕಲಾತಂಡಗಳೊಂದಿಗೆ ಪಟ್ಟಣದಲ್ಲಿ ಬಸ್ ನಿಲ್ದಾಣದಿಂದ ಪ್ರಾರಂಭವಾದ ಮೆರವಣಿಗೆಗೆ ಸಿದ್ದರಾಮೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕೆಪಿಸಿಸಿ ಉಪಾಧ್ಯಕ್ಷ ವಿ.ಮುನಿಯಪ್ಪ ಚಾಲನೆ ನೀಡಿದರು.
ಗಾರುಡಿ ಬೊಂಬೆ, ವೀರಗಾಸೆ, ಟೋಲಿನ ನಾದದೊಂದಿಗೆ ತಾಲ್ಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಬೋವಿ ಜನಾಂಗದವರು ಮೆರವಣಿಗೆಯಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಮಂಗಮ್ಮ, ‘ಬಸವಣ್ಣನವರ ಸಮಕಾಲೀನರಾದ ಸಿದ್ದರಾಮೇಶ್ವರರು ಹಿಂದುಳಿದ ಭೋವಿ ವಡ್ಡರ ಸಮಾಜಕ್ಕೆ ಸೇರಿದವರಾಗಿದ್ದರೂ ಅವರು ಯಾವುದೇ ಜಾತಿ ಜನಾಂಗವೆನ್ನದೆ ಎಲ್ಲ ಸಮಾಜದ ಏಳ್ಗೆಗಾಗಿ ದುಡಿದವರು. ಸರ್ಕಾರ ಇಂಥಾ ವ್ಯಕ್ತಿಯ ಜಯಂತಿಯನ್ನು ಆಚರಿಸುತ್ತಿರುವುದು ಉತ್ತಮ ಬೆಳವಣಿಗೆ’ ಎಂದು ತಿಳಿಸಿದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!