ನಗರದ ಜೌಗುಪೇಟೆಯ ಅಂಗನವಾಡಿ ಕೇಂದ್ರದಲ್ಲಿ ಮಗುವೊಂದನ್ನು ಬಿಟ್ಟು ಬೀಗ ಹಾಕಿಕೊಂಡು ಹೋದ ಘಟನೆ ಮಂಗಳವಾರ ನಡೆದ ಹಿನ್ನೆಲೆಯಲ್ಲಿ ಬುಧವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಲಕ್ಷ್ಮೀದೇವಮ್ಮ ಸ್ಥಳಕ್ಕೆ ಭೇಟಿ ನೀಡಿದ್ದರು.
ಮಗುವಿನ ಮೇಲೆ ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿದವರ ಮೇಲೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದಾಗ, ‘ಅಂಗನವಾಡಿ ಕೇಂದ್ರಕ್ಕೆ ಬೀಗ ಹಾಕಲಾಗುತ್ತದೆ. ಸೋಮವಾರದೊಳಗೆ ಅಂಗನವಾಡಿ ಕಾರ್ಯಕರ್ತೆ ಮತ್ತು ಆಯಾರನ್ನು ಬೇರೆಗೆ ವರ್ಗಾವಣೆ ಮಾಡಲಾಗುವುದು. ಅವರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು. ಇನ್ನು ಮುಂದೆ ಈ ರೀತಿಯ ಅಚಾತುರ್ಯವಾಗದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಚನೆ ನೀಡುತ್ತೇವೆ’ ಎಂದು ತಿಳಿಸಿದರು.
- Advertisement -
- Advertisement -
- Advertisement -
- Advertisement -