ಕಲುಷಿತ ನೀರಿನ ಸೇವನೆಯಿಂದ ಗ್ರಾಮೀಣ ಭಾಗದ ಬಹುತೇಕ ಜನ ವಿವಿಧ ಖಾಯಿಲೆಗಳಿಗೆ ತುತ್ತಾಗುವುದನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣಕ್ಕೆ ಮುಂದಾಗಿದೆ. ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕಾಂಗ್ರೆಸ್ ಮುಖಂಡ ವಿ.ಮುನಿಯಪ್ಪ ತಿಳಿಸಿದರು.
ನಗರದ ಹೊರವಲಯದ ನಲ್ಲಿಮರದಹಳ್ಳಿಯಲ್ಲಿ ಟೌನ್ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ವತಿಯಿಂದ ಸೋಮವಾರ ಸುಮಾರು ೫ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.
ಸರ್ಕಾರದಿಂದ ಸ್ಥಾಪಿಸಲಾಗಿರುವ ಶುದ್ಧ ನೀರಿನ ಘಟಕ ಸಾರ್ವಜನಿಕರ ಸ್ವತ್ತಾಗಿದ್ದು ಇದರ ನಿರ್ವಹಣೆ ಸೇರಿದಂತೆ ಘಟಕದ ಸುತ್ತಲೂ ನೈರ್ಮಲ್ಯ ಕಾಪಾಡಲು ಸ್ಥಳೀಯರು ಸಹಕರಿಸಬೇಕು. ಪ್ರತಿಯೊಬ್ಬರೂ ಶುದ್ಧ ನೀರಿನ ಸೇವನೆ ಮಾಡುವುದರಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ನಲ್ಲಿಮರದಹಳ್ಳಿಯಲ್ಲಿರುವ ಶ್ರೀ ಲಕ್ಷ್ಮಿನರಸಿಂಹ ದೇವಾಲಯದ ಜೀರ್ಣೋದ್ದಾರಕ್ಕಾಗಿ ಆರ್ಥಿಕ ಸಹಾಯ ನೀಡುವಂತೆ ನಾಗರಿಕರು ಮನವಿ ಸಲ್ಲಿಸಿದರು.
ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮುನಿಕೃಷ್ಣಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸುಬ್ರಮಣಿ, ಟೌನ್ ರೇಷ್ಮೆ ಬೆಳೆಗಾರರ ಹಾಗು ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷ ಬಿ.ನಾರಾಯಣಸ್ವಾಮಿ, ಮಾಜಿ ಅಧ್ಯಕ್ಷ ರಾಮಚಂದ್ರ, ನಿರ್ದೇಶಕ ನರಸಿಂಹಮೂರ್ತಿ, ಡಾಲ್ಫಿನ್ ವಿದ್ಯಾಸಂಸ್ಥೆಯ ಎ.ನಾಗರಾಜ್, ಮಡಿವಾಳ ಮಾಚಿದೇವ ಸಂಘದ ರಾಜ್ಯ ಉಪಾಧ್ಯಕ್ಷ ಆರ್.ವಿ.ರಾಜಣ್ಣ, ದೇವಾಲಯ ಟ್ರಸ್ಟ್ನ ಅಧ್ಯಕ್ಷ ವೆಂಕಟೇಶಪ್ಪ ಹಾಜರಿದ್ದರು.
- Advertisement -
- Advertisement -
- Advertisement -
- Advertisement -